ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂ ಒತ್ತುವರಿ ವಿರುದ್ಧ ತೀವ್ರ ಕ್ರಮ: ಕರುಣಾಕರ ರೆಡ್ಡಿ

By Staff
|
Google Oneindia Kannada News

ಬೆಂಗಳೂರು, ಜೂ.30: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರ ವಿರುದ್ಧ ಸರ್ಕಾರ ಸಮರ ಸಾರಿದೆ. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕರುಣಾಕರ ರೆಡ್ಡಿ ಇಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಭೂಗಳ್ಳರು ಎಷ್ಟೇ ದೊಡ್ಡವರಿರಲಿ, ರಾಜಕಾರಣಿಗಳಾಗಿದ್ದರೂ ಸರಿ ಅಂತಹವರ ವಿರುದ್ಧ ಯಾವುದೇ ಮುಜಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು. ಬೆಂಗಳೂರು ಹಾಗೂ ಸುತ್ತಮುತ್ತಲಿನ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಎ.ಟಿ.ರಾಮಸ್ವಾಮಿ ನೇತೃತ್ವದ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕರುಣಾಕರ ರೆಡ್ಡಿ ತಿಳಿಸಿದರು.

ಹಾಗೆಯೇ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿ 1 ಲಕ್ಷ 22 ಸಾವಿರದ 918 ಎಕರೆ ಸರ್ಕಾರಿ ಜಮೀನಿದೆ. ಇದರಲ್ಲಿ ಸುಮಾರು 33 ಸಾವಿರದ 877 ಎಕರೆ ಒತ್ತುವರಿಯಾಗಿದೆ. ಸರ್ಕಾರ ಇದುವರೆಗೂ 8718 ಎಕರೆ ಜಮೀನನ್ನು ವಶಪಡಿಸಿಕೊಂಡಿದೆ. ಉಳಿದ ಸುಮಾರು 11, 710 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದರು.

(ದಟ್ಸ್‌ಕನ್ನಡ ವಾರ್ತೆ)
ಮಡಿಕೇರಿ ಮೇಲೆ ಕವಿದ ಭೂಕಬಳಿಕೆಯ ಮಂಜು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X