ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಂಬತ್ತು ಸಾವು
ಗುಲ್ಬರ್ಗ, ಜು.10: ಗುಲ್ಬರ್ಗ ಹೊರವಲಯದಲ್ಲಿ ಗುರುವಾರ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ಮೃತ ಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ನಗರದಿಂದ 10 ಕಿ.ಮೀ ದೂರದಲ್ಲಿರುವ ಪೆನಗಾವ ಗ್ರಾಮದ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಮೂರು ಮಂದಿ ಮೃತಪಟ್ಟಿದ್ದಾರೆ. ಘಟನೆಯ ನಂತರ ಲಾರಿ ಚಾಲಕ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದರು. ಅಪಘಾತದಲ್ಲಿ ಮೃತಪಟ್ಟ ಪೃಥ್ವಿ ಶಿವಾನಂದ (23) ಹಾಗೂ ಪಿಂಟೂ ಅಲಿಯಾಸ್ ಶರಣಬಸಪ್ಪ (24) ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಮತ್ತೊಬ್ಬರನ್ನು ಕುಮಾರ್ ಮಲ್ಲಿಕಾರ್ಜುನ್ (32) ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯರಾತ್ರಿ ಕಪ್ಪನೂರು ಕ್ರಾಸ್ ಬಳಿ ದ್ವಿಚಕ್ರ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೆ ಮೃತಪಟ್ಟಿದ್ದು ಒಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳು ಧಾಬಾ ಒಂದರಲ್ಲಿ ಊಟ ಮಾಡಿಕೊಂಡು ಹಿಂತಿರುಗುತ್ತಿರಬೇಕಾದರೆ ಅಪಘಾತ ಸಂಭವಿಸಿದೆ. ಮೃತರನ್ನು ವಿಶಾಲ್(18) ಹಾಗೂ ಮೈಪಾಲ್ ರೆಡ್ಡಿ (19) ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
(ದಟ್ಸ್ಕನ್ನಡ ವಾರ್ತೆ)