ಹೋಗೇನಕಲ್ ವಿವಾದ ಕುರಿತ ಸರ್ವಪಕ್ಷ ಸಭೆ
ಬೆಂಗಳೂರು, ಜು. 23 : ಹೋಗೇನಕಲ್ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬುಧವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಆರಂಭವಾಗಿದೆ.
ಕಳೆದ ಅನೇಕ ದಿನಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ವಿವಾದಿತ ಹೋಗೇನಕಲ್ ಯೋಜನೆಯನ್ನು ತಮಿಳುನಾಡು ಸರ್ಕಾರ ಕೈಗೆತ್ತಿಕೊಳ್ಳಲು ಮುಂದಾಗಿರುವ ಹಿನ್ನಲೆಯಲ್ಲಿ ಈ ಸಭೆಗೆ ಮಹತ್ವದ ಬಂದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸರ್ಕಾರದ ಹಿರಿಯ ಸಚಿವರು, ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದಾರೆ.
ಈ ಮಧ್ಯೆ ವಿವಾದಿತ ಹೋಗೇನಕಲ್ ಯೋಜನೆಯನ್ನು ಯಾವ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಯೋಜನೆ ಮುಂದುವರೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ ಮತ್ತೆ ಪುನರುಚ್ಚರಿಸಿರುವುದು ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಗಳಿವೆ. ತಮಿಳುನಾಡು ಮತ್ತೆ ಕಾಲು ಕೆದರಿ ಜಗಳಕ್ಕಿಳಿಯಲು ಮುಖ್ಯ ಕಾರಣ ಕೇಂದ್ರದಲ್ಲಿ ಯುಪಿಎ ಸರ್ಕಾರ ಭದ್ರಸ್ಥಾನ ಕಂಡು ಕೊಂಡಿರುವುದು ಇದಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
(ದಟ್ಸ್ಕನ್ನಡ ವಾರ್ತೆ)