ಜಾರ್ಖಂಡ್ ನಲ್ಲಿಯೂ ಸ್ಫೋಟ 5 ಮಂದಿಗೆ ಗಾಯ
ನವದೆಹಲಿ, ಜು. 27 : ದೇಶದಲ್ಲಿ ಅನೇಕ ಕಡೆಗಳಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಬೆಂಗಳೂರು, ಶನಿವಾರ ಅಹಮದಾಬಾದ್ಗಳಲ್ಲಿ ಸರಣಿ ಸ್ಫೋಟದ ಮಾದರಿಯಲ್ಲೇ ಭಾನುವಾರ (ಜು.27) ನಸುಕಿನ ವೇಳೆ ಜಾರ್ಖಡ್ನ ಬಸ್ ನಿಲ್ದಾಣದಲ್ಲಿ ನಿಗೂಢ ರೀತಿಯಲ್ಲಿ ಬಾಂಬ್ ಸ್ಫೋಟವಾಗಿರುವ ಸುದ್ದಿ ವರದಿಯಾಗಿದೆ.
ಈ ವಿಷಯವನ್ನು ಸ್ಪಷ್ಟಪಡಿಸಿರುವ ಜಾರ್ಖಂಡ್ ನ ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ನಸುಕಿನ ವೇಳೆಯಲ್ಲಿ ಬಸ್ ನಿಲ್ದಾಣದ ಬಳಿ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರು ಮತ್ತು ಅಹಮದಾಬಾದ್ ನಂತರ ಜಾರ್ಖಂಡನ್ನು ಗುರಿಯಾಗಿಸಿಕೊಂಡಿರುವ ಉಗ್ರರು, ಟೈಮರ್ ಬಳಿಸಿ ಬಾಂಬನ್ನು ಸ್ಫೋಟಗೊಳಿಸಿದ್ದಾರೆ ಎಂದು ಜಾರ್ಖಂಡ್ ಪೊಲೀಸ್ ವರಿಷ್ಠ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆಯೇ ಆರೋಪಿಗಳ ಬಂಧನಕ್ಕೆ ಪೊಲೀಸರು ವ್ಯಾಪಕ ಜಾಲ ಬೀಸಿದ್ದಾರೆ. ಕರ್ನಾಟಕ ಮತ್ತು ಗುಜರಾತನಲ್ಲಿ ನಡೆದ ಸ್ಫೋಟಕ್ಕೂ ಇದಕ್ಕೂ ಸಂಬಂಧವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
(ಏಜೆನ್ಸೀಸ್)