ಕನ್ನಡಿಗರ ಪರೋಕ್ಷ ಕ್ಷಮೆ ಯಾಚಿಸಿದ ರಜನಿಕಾಂತ್
ಬೆಂಗಳೂರು, ಜು.31:''ತಪ್ಪಾಗಿರುವುದು ಸಹಜ, ಮುಂದೆ ತಪ್ಪಾಗದಂತೆ ನೋಡಿಕೊಳ್ಳುತ್ತೇನೆ. ಮುಂದೆ ತಪ್ಪು ಮಾಡುವುದಿಲ್ಲ. ಕನ್ನಡಿಗರ ಬಗ್ಗೆ ನನಗೆ ಅಪಾರ ಗೌರವ ಇದೆ. ದಯವಿಟ್ಟು ಕುಸೇಲನ್ ಬಿಡುಗಡೆಗೆ ಅವಕಾಶ ಮಾಡಿಕೊಡಬೇಕು'' ಎಂದು ನಟ ರಜನಿಕಾಂತ್ ಪರೋಕ್ಷವಾಗಿ ಟಿವಿ 9 ಸುದ್ದಿ ವಾಹಿನಿ ಮೂಲಕ ಕ್ಷಮೆ ಕೋರಿದ್ದಾರೆ.
ಹೈದರಾಬಾದ್ನಲ್ಲಿ ಮಾತನಾಡುತ್ತಿದ್ದ ಅವರು, 'ಕನ್ನಡದ ಮಕ್ಕಳಿಂದ ದೊಡ್ಡ ಪಾಠ ಕಲಿತಿದ್ದೇನೆ. ನಾನು ಒದೆಯಿರಿ ಎಂದು ಹೇಳಿದ್ದು ಪುಂಡು ಪೋಕರಿಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಯನ್ನು ನಾಶ ಮಾಡುವವರಿಗೆ ಹೊರತು ಕನ್ನಡ ಹೋರಾಟಗಾರರನ್ನು ಉದ್ದೇಶಿಸಿ ಅಲ್ಲ. ಒಳ್ಳೆಯವರಿಗೆ ತಲೆಬಾಗುತ್ತೇನೆ. ಪುಂಡುಪೋಕರಿಗಳಿಗೆ ಯಾಕೆ ತಲೆಬಾಗಬೇಕು ಎಂದು ಪ್ರಶ್ನಿಸಿದರು.
ನಾನು ರಾಜಕಾರಣಿ ಖಂಡಿತ ಅಲ್ಲ. ಹೀಗಾಗಿ ಮಾತಾಡುವಾಗ ತಪ್ಪಾಗಿದೆ. ಮುಂದೆ ಮಾತಾಡುವಾಗ ವಿಚಾರಮಾಡಿ ಮಾತನಾಡುತ್ತೇನೆ. ಕನ್ನಡ ಹೋರಾಟಗಾರರಿಗೆ ಏನು ಸಹಾಯ ಬೇಕೋ ಎಲ್ಲ ಮಾಡುತ್ತೇನೆ. ಇಂದು ನಾನು ಸಂತೋಷವಾಗಿದ್ದೇನೆ. ಹಣ, ಹೆಸರು ಎಲ್ಲ ದೊರೆತಿದೆ ಆದರೆ ನಾನು ಕಂಡಕ್ಟರ್ ಆಗಿದ್ದೆ ಎಂಬುದನ್ನು ಇನ್ನೂ ಮರೆತಿಲ್ಲ. ಸುಮಾರು ಜನ ನನ್ನನ್ನು ಅಹಂಕಾರಿ ಎನ್ನುತ್ತಾರೆ. ನಾನು ದುರಂಹಂಕಾರಿ ಖಂಡಿತ ಅಲ್ಲ ಎಂದು ನುಡಿದರು.
ಅವರು ತಮ್ಮ ಮಾತಿನ ಮಧ್ಯೆ ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯನಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಾಟಾಳ್ ನಾಗರಾಜ್ ಹೆಸರುಗಳನ್ನು ಪ್ರಸ್ತಾಪಿಸಿ ಕನ್ನಡ ಹೋರಾಟಗಾರರೆಲ್ಲರು ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಂಡರು.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರವೀಣ್ ಕುಮಾರ್ ಶೆಟ್ಟಿ ಇದೊಂದು ಒಳ್ಳೆ ಯ ಬೆಳವಣಿಗೆ, ನಮ್ಮ ಪದಾಧಿಕಾರಿಗಳು ಹಾಗೂ ಗಡಿ ಹೋರಾಟ ಸಮಿತಿಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಹಾಗೆಯೇ ಹೊಗೇನಕಲ್ ಕರ್ನಾಟಕದ ಅವಿಭಾಜ್ಯ ಅಂಗ. ಈ ವಿಚಾರದಲ್ಲಿ ಯಾವುದೇ ಹೋರಾಟಕ್ಕು ಸಿದ್ಧವಿರುವುದಾಗಿ ಹೇಳಿದರು. ಹಾಗೆಯೇ ರಜನಿಕಾಂತ್ರ ಪರೋಕ್ಷ ಕ್ಷಮೆಯಾಚನೆಯನ್ನು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಪ್ರವೀಣ್ ಶೆಟ್ಟಿ ಬಳಗದ ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ನಟ ದ್ವಾರಕೀಶ್ ಸ್ವಾಗತಿಸಿದ್ದಾರೆ.
ರಜನಿಕಾಂತ್ ಕನ್ನಡಿಗರ ಪರೋಕ್ಷ ಕೇಳುವ ಮೂಲಕ ಒಟ್ಟಿನಲ್ಲಿ ಕುಸೇಲನ್ ಬಿಡುಗಡೆಗೆ ಇದ್ದ ಅಡ್ಡಿ ಆತಂಕ ನಿವಾರಣೆ ಅಗಿದೆ. ಕನ್ನಡ ಪರ ಸಂಘಟನೆಗಳು ತಮ್ಮ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ ಹೇಳಿವೆ.(ದಟ್ಸ್ಕನ್ನಡ ವಾರ್ತೆ)
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications