ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಲ್ಲೂರಿನಲ್ಲಿ ಯಡಿಯೂರಪ್ಪ ಚಂಡಿಕಾ ಹೋಮ

By Staff
|
Google Oneindia Kannada News

ಮಂಗಳೂರು, ಆ.3 : ಪಡಿತರ ಚೀಟಿ ವಿತರಣೆಯಲ್ಲಿ ಉದ್ಭವಿಸಿರುವ ಸಮಸ್ಯೆಯನ್ನು ಸೆಪ್ಟಂಬರ್ ತಿಂಗಳೊಳಗೆ ಬಗೆಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿ ವಿತರಣೆಯಲ್ಲಿ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ. ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಪಡಿತರ ಚೀಟಿ ವಿತರಣೆಗೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವುದರ ಮೂಲಕ ರಾಜ್ಯದ 10 ಲಕ್ಷ ನಿರುದ್ಯೋಗಿಗಳಿಗೆ ತರಬೇತಿ ನೀಡಲಾಗುವುದು ಎಂದ ಅವರು, ಐಟಿ-ಬಿಟಿ ಹಾಗೂ ಬಿಪಿಓಗಳಂಥ ಕಂಪನಿಗಳನ್ನು ರಾಜ್ಯದ ಎಲ್ಲಡೆ ಸ್ಥಾಪಿಸಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ವಿವರಿಸಿದರು.

ಸೂರ್ಯ ಗ್ರಹಣದಿಂದ ಆಗಿರುವ ದೋಷವನ್ನು ಪರಿಹಸಿರಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಥಯಾತ್ರೆ ಕೈಗೊಂಡಿದ್ದು. ಭಾನುವಾರ ಉಡುಪಿ ಶ್ರೀಕೃಷ್ಣಮಠ ಹಾಗೂ ಕೊಲ್ಲೂರಿನ ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ಚಂಡಿಕಾ ಹೋಮ ಪೂಜಾ ಕೈಂಕರ್ಯಗಳನ್ನು ನೆರವೇರಿಸುವುದರ ಮೂಲಕ ದೇವಿಯ ದರ್ಶನ ಪಡೆದುಕೊಂಡರು.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X