ಕಡೆಗೂ ಡಾ.ರಾಜ್ ಅಂಚೆ ಚೀಟಿಗೆ ಠಸ್ಸೆ ಒತ್ತಿದ ಕೇಂದ್ರ
ತಿರುಚಿರಾಪಳ್ಳಿ, ಆ.5: ಕನ್ನಡಿಗರ ಕಣ್ಮಣಿ ಡಾ.ರಾಜ್ಕುಮಾರ್ ಸೇರಿದಂತೆ ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರಿನ ಸೇಂಟ್ ಜೋಸೆಫ್ ಬಾಲಕರ ಪ್ರೌಢಶಾಲೆಯ ಅಂಚೆ ಚೀಟಿಗಳನ್ನು ಈ ವರ್ಷ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಹಾಗೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಭಕ್ತವತ್ಸಲಂ, 'ದಿನಮಲರ್' ತಮಿಳು ದಿನಪತ್ರಿಕೆ ಸಂಸ್ಥಾಪಕ ಟಿ.ವಿ.ರಾಮಸುಬ್ಬಯ್ಯರ್, ಶಹನಾಯಿ ಮಾಂತ್ರಿಕ ಬಿಸ್ಮಿಲ್ಲಾ ಖಾನ್, ಗಾಂಧಿವಾದಿ ತಿಲ್ಲಾಯಾಡಿ ವಲ್ಲಿಯಮ್ಮೈ, ಇತಿಹಾಸಕಾರರಾದ ರಾಣಿ ವೇಲು ನಾಚಿಯರ್, ಗೀತ ರಚನೆಕಾರ ಉದುಮಲೈ ನಾರಾಯಣ ಕವಿ, ಸಾಮಾಜಿಕ ಕಾರ್ಯಕರ್ತ ಪಿ.ಟಿ.ತೇಯಗರಾಯ, ಬಂಗಾಳಿ ನಟ ಉತ್ತಮ್ ಕುಮಾರ್ ಹಾಗೂ ಕೇಂದ್ರ ಮಾಜಿ ಸಚಿವ ವೈ.ಬಿ.ಚವಾಣ್ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲು ಅಂಚೆ ಚೀಟಿ ಸಲಹಾ ಸಮಿತಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ. ಗಣ್ಯರ ಅಂಚೆ ಚೀಟಿ ಪಟ್ಟಿಯಲ್ಲಿ ತಮಿಳುನಾಡು ಸಿಂಹಪಾಲು ಪಡೆದಿದೆ.
ಡಾ.ರಾಜ್ ಸೇರಿದಂತೆ ಕರ್ನಾಟಕದ ಐದು ಅಂಚೆ ಚೀಟಿಗಳನ್ನು ಬಿಡುಗಡೆಗೆ ಮಾಡುವುದಾಗಿ ಈ ಹಿಂದೆ ಪ್ರಧಾನಿ ಮನಮೋಹನ್ಸಿಂಗ್ ಕೊಟ್ಟ .ಭರವಸೆ ಹುಸಿಯಾಗಿದೆ. ರಾಜ್ಕುಮಾರ್ ಅವರ ಅಂಚೆ ಚೀಟಿ ಪ್ರಕಟಿಸುವ ಪ್ರಸ್ತಾವನೆಯನ್ನು ರಾಜ್ಯ ಅಂಚೆ ಇಲಾಖೆ ಎರಡು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಹಾಗೆಯೇ ಕರ್ನಾಟಕ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಸುವರ್ಣ ಕರ್ನಾಟಕ ಅಂಚೆ ಚೀಟಿ ಮುದ್ರಿಸುವ ಪ್ರಸ್ತಾವನೆಯನ್ನು ಕಳುಹಿಸಿತ್ತು.
ಪ್ರಮುಖ ಸಭೆ-ಸಮಾರಂಭಗಳ ಪಟ್ಟಿಯಲ್ಲಿ ಬೀಜಿಂಗ್ ಒಲಂಪಿಕ್ಸ್, ಅಕ್ಟೋಬರ್ 2008ರಲ್ಲಿ ಪುಣೆಯಲ್ಲಿ ಪ್ರಾರಂಭವಾಗಲಿರುವ ಮೂರನೆ ಕಾಮನ್ವೆಲ್ತ್ ಯುವ ಕ್ರೀಡೆಗಳು, ಮಕ್ಕಳ ದಿನಾಚರಣೆ ಹಾಗೂ ಪದಾತಿ ಪಡೆಯ ವರ್ಷಾಚರಣೆ ಈ ವರ್ಷ ಬಿಡುಗಡೆಯಾಗುವ ಅಂಚೆ ಚೀಟಿಗಳ ಪಟ್ಟಿಯಲ್ಲಿ ಸ್ಥಾನಪಡೆದಿವೆ.
ದೇಶದ ಪ್ರಸಿದ್ಧ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ, ಸೇಂಟ್ ಜೋಸೆಫ್ ಬಾಲಕರ ಪ್ರೌಢಶಾಲೆ, ಭಾರತ ಅನಿಲ ಪ್ರಾಧಿಕಾರ, ರಾಮ್ಪುರ್ ರಾಝಾ ಗ್ರಂಥಾಲಯ, ಕೋಸ್ಟ್ ಗಾರ್ಡ್, ಸರ್ದಾರ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ ಹಾಗೂ ನಾಲ್ಕು ವಲಯಗಳ ರೈಲ್ವೆ ನಿಲ್ದಾಣಗಳು ಸೇರಿವೆ. ಈ ಎಲ್ಲಾ ಅಂಚೆಚೀಟಿಗಳ ವಿನ್ಯಾಸ ಹಾಗೂ ಬಿಡುಗಡೆ ದಿನಾಂಕವನ್ನು ಅಂಚೆ ಇಲಾಖೆಯ ಪ್ರಧಾನನಿರ್ದೇಶಕರು ಬಿಡುಗಡೆ ಮಾಡಲಿದ್ದಾರೆ.
(ಏಜೆನ್ಸೀಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications