ಬಿಐಎಎಲ್ ಮಾಹಿತಿ ಹಕ್ಕು ಕಾಯ್ದೆಗೆ ಬರಲಿದೆ : ಆಯೋಗ
ಬೆಂಗಳೂರು, ಆ. 19 : ಖಾಸಗಿ ಸಹಭಾಗಿತ್ವದಲ್ಲಿ ನಡೆಯುವ ಸರ್ಕಾರಿ ಯೋಜನೆಗಳು ರಾಜ್ಯ ಮಾಹಿತಿ ಹಕ್ಕು ಆಯೋಗದ ವ್ಯಾಪ್ತಿಯಡಿಯಲ್ಲಿ ಬರಲಿದೆ. ಈ ಹಿನ್ನೆಲೆಯಲ್ಲಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎಎಲ್) ರಾಜ್ಯ ಮಾಹಿತಿ ಹಕ್ಕು ಆಯೋಗದ ಮಿತಿಗೆ ಒಳಪಟ್ಟಿದೆ ಎಂದು ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತ ಕೆ.ಕೆ. ಮಿಶ್ರಾ ಹೇಳಿದ್ದಾರೆ.
ರಾಜ್ಯ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಕೆ.ಕೆ.ಮಿಶ್ರಾ ಹಾಗೂ ಮಾಹಿತಿ ಹಕ್ಕು ಆಯುಕ್ತರಾದ ಕೃಷ್ಣ ಮತ್ತು ಎ.ತಿಪ್ಪೇಸ್ವಾಮಿ ಅವರನ್ನು ಒಳಗೊಂಡ ರಾಜ್ಯ ಮಾಹಿತಿ ಆಯೋಗದ ಪೂರ್ಣ ಪ್ರಮಾಣದ ನ್ಯಾಯಾಪೀಠವು, ಬಿಐಎಎಲ್ ಸಾರ್ವಜನಿಕ ಸಂಸ್ಥೆಯಾಗಿದೆ. ಇದರ ಎಲ್ಲ ಅಗುಹೋಗುಗಳನ್ನು ತಿಳಿದುಕೊಳ್ಳಲು ಜನಸಾಮಾನ್ಯರ ಹಕ್ಕುದಾರರಾಗಿತ್ತಾರೆ ಅಭಿಪ್ರಾಯಪಟ್ಟಿದೆ.
ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಖಾಸಗಿ ಸಹಭಾಗಿತ್ವ ಹೊಂದಿದ್ದರೂ ಅದರ ನಿರ್ಮಾಣಕ್ಕೆ ಸರ್ಕಾರಿ ಹಣವನ್ನು ವಿನಿಯೋಗಿಸಲಾಗಿದೆ. ಅದ್ದರಿಂದ ವಿಮಾನ ನಿಲ್ದಾಣ ಕೂಡಾ ರಾಜ್ಯ ಮಾಹಿತಿ ಹಕ್ಕು ಆಯೋಗದ ವಾಪ್ತಿಗೆ ಒಳಪಟ್ಟಿದ್ದು, ಸಾರ್ವಜನಿಕರಿಗೆ ಇಚ್ಛೆಪಟ್ಟಲ್ಲಿ ಇದರ ಎಲ್ಲ ವಿವರವನ್ನು ಕಾನೂನಿನಡಿಯಲ್ಲಿ ನೀಡಬೇಕು ಎಂದು ನ್ಯಾಯಾಪೀಠ ಬಿಐಎಎಲ್ ಗೆ ಆದೇಶ ನೀಡಿದೆ. ಅಲ್ಲದೇ ವಿಮಾನ ನಿಲ್ದಾಣದ ಕುರಿತಾಗಿ ಮಾಹಿತಿ ನೀಡಲು ವಿಶೇಷ ಸಂಪರ್ಕಾಧಿಕಾರಿಯೊಬ್ಬರನ್ನು ನೇಮಿಸುವಂತೆ ಸಂಸ್ಥೆಗೆ ಸೂಚನೆ ನೀಡಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಬಿಐಎಎಲ್ ಸಂಸ್ಥೆ ವಿವರ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಗರದ ಬೆನ್ಸನ್ ಐಸಾಕ್ ಎಂಬುವವರು ರಾಜ್ಯ ಮಾಹಿತಿ ಹಕ್ಕು ಆಯೋಗದ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡು ಎರಡೇ ವಾರದಲ್ಲಿ ಆಯೋಗ ವಿಚಾರಣೆ ನಡೆಸಿ ತೀರ್ಪು ನೀಡಿದೆ.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications