ಗ್ರೇಟರ್ ನೋಯಿಡಾ ಅವ್ಯವಹಾರ ನಮ್ಮದಲ್ಲ: ಮಾಯಾ
ಲಕ್ನೋ, ಆ. 19 : ಮುಲಾಯಂ ಸಿಂಗ್ ಯಾದವ್ ಸರ್ಕಾರ ಅಡಳಿತದಲ್ಲಿದ್ದಾಗ ಗ್ರೇಟರ್ ನೋಯಿಡಾ ಯೋಜನೆಯ ಕುರಿತ ಭೂಖರೀದಿ ಹಾಗೂ ರೈತರಿಗೆ ಪರಿಹಾರ ನೀಡುವ ವಿಷಯದಲ್ಲಿ ಸಮಸ್ಯೆ ಉದ್ಭವವಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಅಕ್ಟೋಬರ್ 2006ಕ್ಕಿಂತ ಪೂರ್ವದಲ್ಲಿ ಯೋಜನೆಯ ಭೂಖರೀದಿಯ ವ್ಯವಹಾರ ನಡೆದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯೋಜನೆಯ ಕುರಿತ ಯಾವ ಭೂಖರೀದಿಯ ಪ್ರಕ್ರಿಯೆಯೂ ನಡೆದಿಲ್ಲ ಎಂದರು. 2005-06ನೇ ಸಾಲಿನಲ್ಲಿ ಗ್ರೇಟರ್ ನೋಯಿಡಾ ಯೋಜನೆಗೆ ಸಂಬಂಧಿಸಿದಂತೆ ಗಾಡಿಬಚ್ಚೆಡಾ ಪಟ್ಟಣ ಸೇರಿದಂತೆ ಒಟ್ಟು ಒಂಬತ್ತು ಹಳ್ಳಿಗಳು ಈ ಯೋಜನೆಯ ಕಾರ್ಯವ್ಯಾಪ್ತಿಗೆ ಬರಲಿವೆ ಎಂದು ನೀಲ ನಕ್ಷೆಯನ್ನು ತಯಾರಿಸಲಾಗಿದೆ. ಇಲ್ಲಿರುವ ಭೂಖರೀದಿ ಮತ್ತು ರೈತರಿಗೆ ಪರಿಹಾರಧನವನ್ನು ಅಂದಿನ ಸರ್ಕಾರವೇ ನಿರ್ಧರಿಸಿದೆ. ಅದರ ಆಧಾರದ ಮೇಲೆ ಗ್ರೇಟರ್ ನೋಯಿಡಾ ಅಥಾರಿಟಿಯಿಂದ ಎಲ್ಲ ರೈತರಿಗೆ ಪರಿಹಾರ ಧನವನ್ನು ವಿತರಿಸಲಾಗಿದೆ. ಆದರೆ 2006ರಲ್ಲಿ ಇದ್ದ ಬೆಲೆ ಇಂದಿನ ಬೆಲೆಗೆ ಅಜಗಜಾಂತರ ವ್ಯತ್ಯಾಸವಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ ಎಂದು ಮಾಯಾವತಿ ವಿವರಿಸಿದರು.
ಅನಗತ್ಯವಾಗಿ ಸಮಾಜವಾದಿ ಪಕ್ಷದ ಮುಖಂಡರು ಯೋಜನೆ ಕುರಿತು ಇಲ್ಲದ ಸಮಸ್ಯೆಗಳನ್ನು ಹುಟ್ಟುಹಾಕುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ತಮ್ಮ ಸರ್ಕಾರದಿಂದಲೇ ಯೋಜನೆಗೆ ಅಂಕಿತ ಬೀಳುವ ಮೂಲಕ ಕಾಮಗಾರಿ ಆರಂಭವಾಗಿದೆ ಎನ್ನುವ ಸತ್ಯವನ್ನು ಆ ಪಕ್ಷದ ಮುಖಂಡರು ಅರಿಯಬೇಕು ಎಂದು ಹೇಳಿದರು. ಗ್ರೇಟರ್ ನೋಯಿಡಾ ಸಮಸ್ಯೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡರು ರೈತರೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ರೈತರು ನಡೆಸುತ್ತಿರುವ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿ ಅನೇಕ ಸಮಸ್ಯೆಗಳನ್ನು ಉಂಟುಮಾಡಿದೆ.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications