ಎನ್ಎಸ್ ಜಿ ಸಭೆಗೆ ತೆರಳಿದ ಭಾರತದ ನಿಯೋಗ
ನವದೆಹಲಿ, ಆ. 19 : ಪರಮಾಣು ಸರಬರಾಜು ರಾಷ್ಟ್ರಗಳ(ಎನ್ಎಸ್ ಜಿ) ಸಭೆಯಲ್ಲಿ ಭಾಗವಹಿಸಲು ಭಾರತದ ವಿದೇಶಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಶಂಕರ ಮೆನನ್ ಅವರೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳ ನಿಯೋಗ ಮಂಗಳವಾರ ವಿಯನ್ನಾಗೆ ತೆರಳಿತು.
ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಆ. 21ರಂದು 45 ಸದಸ್ಯರನ್ನು ಹೊಂದಿರುವ ಪರಮಾಣು ಸರಬರಾಜು ರಾಷ್ಟ್ರಗಳ ಸಭೆ ನಡೆಯಲಿದೆ. ಎನ್ಎಸ್ ಜಿ ರಾಷ್ಟ್ರಗಳಲ್ಲಿ ಜರ್ಮನಿ, ದಕ್ಷಿಣ ಆಫ್ರಿಕಾ ಮತ್ತು ಹಂಗೇರಿ ದೇಶಗಳ ಮುಖಂಡರೊಂದಿಗೆ ಆ. 21ರ ಸಭೆಗೂ ಮುನ್ನ ಭಾರತದ ನಿಯೋಗ ಮಾತುಕತೆ ನಡೆಸಲಿದೆ.
ಭಾರತೀಯ ನಿಯೋಗ ವಿಯನ್ನಾಗೆ ತೆರಳುವುದಕ್ಕಿಂತ ಮುಂಚೆ ಸೋಮವಾರ ನವದೆಹಲಿಯಲ್ಲಿ ಪರಮಾಣು ಒಪ್ಪಂದ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ರಾಷ್ಟ್ರೀಯ ಸಲಹೆಗಾರ ಎಂ.ಕೆ.ನಾರಾಯಣನ್ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ವಿದೇಶಾಂಗ ಇಲಾಖೆ ಕಾರ್ಯದರ್ಶಿ ಶಿವಶಂಕರ ಮೆನನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅತ್ತ ಜಾರ್ಜ್ ಬುಷ್ ಆಡಳಿತ ಆ. 21 ರಂದು ನಡೆಸಲಿರುವ ಎನ್ಎಸ್ ಜಿ ಸಭೆ ಸೇರಿದಂತೆ ಒಪ್ಪಂದಕ್ಕೆ ಅಂತಿಮ ಸ್ಪರ್ಶ ಕೊಡಲು ಭಾರಿ ಲಾಬಿ ನಡೆಸಿದೆ.
ವಿದೇಶಾಂಗ ಕಾರ್ಯದರ್ಶಿ ಶಿವಶಂಕರ ಮೆನನ್ ನೇತೃತ್ವದಲ್ಲಿ ಪ್ರಧಾನಮಂತ್ರಿ ರಾಜಕೀಯ ಸಲಹೆಗಾರ ಶ್ಯಾಮ್ ಶರಣ್, ಪರಮಾಣು ಇಲಾಖೆಯ ಆರ್. ಬಿ. ಗ್ರೋವರ್ ಹಾಗೂ ಡಿ.ಬಿ.ವೆಂಕಟೇಶ್ ವರ್ಮಾ ಅವರು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಅಣು ಒಪ್ಪಂದಕ್ಕೆ ಅಧಿಕೃತ ಮುದ್ರೆ ಖಂಡಿತ: ಪ್ರಣಬ್
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications