ಆ. 25 ರಂದು ವಿಶ್ವಾಸಮತ ಯಾಚನೆ : ಮಧು ಕೊಡಾ
ರಾಂಚಿ/ ನವದೆಹಲಿ, ಆ. 19 : ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವು ಬೆಂಬಲ ಹಿಂತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಅಲ್ಪಮತಕ್ಕೆ ಕುಸಿದಿರುವುದರಿಂದ ಆ. 25ಕ್ಕೆ ಸದನದಲ್ಲಿ ಬಹುಮತ ಸಾಬೀತುಪಡಿಸಲಾಗುವುದು ಎಂದು ಮುಖ್ಯಮಂತ್ರಿ ಮಧು ಕೊಡಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ರಾಜ್ಯಪಾಲ ಸಯ್ಯದ್ ಶಿಬ್ತೆ ರಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ಜೆಎಂಎಂ ಮುಖಂಡ ಶಿಬುಸೋರೆನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆದಿರುವುದರಿಂದ ಯಾವುದೇ ಬದಲಾವಣೆಗಳು ಉಂಟಾಗುವುದಿಲ್ಲ. ಸರ್ಕಾರಕ್ಕೆ ಬೇಕಿರುವ ಅಗತ್ಯ ಮತಗಳು ನಮ್ಮ ಬಳಿ ಇವೆ ಎಂದು ರಾಜ್ಯಪಾಲರಿಗೆ ತಿಳಿಸಿದ್ದಾರೆ.
ಇದರ ಬೆನ್ನೆಲ್ಲೇ ಜೆಎಂಎಂ ಮುಖಂಡ ಸುಧೀರ್ ಮೆಹ್ತೊ ಮಾತನಾಡಿ, ಕಾಂಗ್ರೆಸ್ ವರಿಷ್ಠರು ಮಾತಿಗೆ ತಪ್ಪಿದ್ದಾರೆ. ಅತ್ಯಂತ ಸಂಕಷ್ಟದ ಸಮಯದಲ್ಲಿ ಯುಪಿಎ ಸರ್ಕಾರವನ್ನು ಕಾಪಾಡಿರುವ ನಮಗೆ ಕಾಂಗ್ರೆಸ್ ನಾಯಕರು ಉತ್ತಮ ಬಹುಮಾನವನ್ನೇ ನೀಡಿದ್ದಾರೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿ ಮಧು ಕೊಡಾ ರಾಜೀನಾಮೆ ನೀಡದಿರುವ ಹಿನ್ನೆಲೆಯಲ್ಲಿ ಜೆಎಂಎಂನ 17 ಶಾಸಕರು ಮತ್ತು 5 ಮಂದಿ ಸಂಸದರು ಮತ್ತೊಂದು ಸುತ್ತು ಸಭೆ ನಡೆಸಿ ಮಾತುಕತೆ ನಡೆಸಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳು ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸುಧೀರ್ ಮೆಹ್ತೊ ಅವರು ಮಧು ಕೊಡಾ ಸರ್ಕಾರದಲ್ಲಿ ಉಪಮಖ್ಯಮಂತ್ರಿಯಾಗಿದ್ದರು. ಜೆಎಂಎಂ ಪಕ್ಷ ಬೆಂಬಲ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಎಂಎಂ ಮುಖಂಡರು ಬೆಂಬಲ ಹಿಂದಕ್ಕೆ ಪಡೆದು ರಾಷ್ಟ್ರಪತಿ ಆಳ್ವಿಕೆ ಹೇರಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಬಗ್ಗುವುದಿಲ್ಲ. ಆ. 25ರಂದು ಸರ್ಕಾರ ಬಹುಮತ ಸಾಬೀತುಪಡಿಸಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಜಾರ್ಖಂಡ್: ಅತಂತ್ರವಾದ ಮಧು ಕೊಡಾ ಸರ್ಕಾರ
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications