ಯಡಿಯೂರಪ್ಪ ಅಮೆರಿಕ ಪ್ರವಾಸ ಖಚಿತ
ಬೆಂಗಳೂರು, ಆ. 19 : ಅತಿವೃಷ್ಟಿಯಿಂದಾಗಿ ಉತ್ತರ ಕರ್ನಾಟಕ ನೆರೆಹಾವಳಿ ಎದುರಿಸುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವರ, ಅಧಿಕಾರಿಗಳ ದಂಡು ಆಗಸ್ಟ್ 29ರಿಂದ 31ರವರೆಗೆ ಅಮೆರಿಕಾದ ಶಿಕಾಗೊದಲ್ಲಿ ನಡೆಯುತ್ತಿರುವ 'ಅಕ್ಕ' ವಿಶ್ವ ಕನ್ನಡ ಸಮ್ಮೇಳನಕ್ಕೆ ಹೋಗುತ್ತಿರುವುದನ್ನು ಮುಖ್ಯಮಂತ್ರಿ ಕಾರ್ಯಾಲಯ ಖಚಿತಪಡಿಸಿದೆ.
ನೆರೆಹಾವಳಿಯಿಂದ ಮನೆ-ಮಠ, ಬೆಳೆ, ಜಾನುವಾರು ಕಳೆದುಕೊಂಡು ಕರ್ನಾಟಕದ ಜನತೆ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಅಮೆರಿಕ ಪ್ರವಾಸಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅದಕ್ಕೆ ಪೂರಕವೆಂಬಂತೆ, 'ಅಕ್ಕ' ಸಮ್ಮೇಳನ ಮತ್ತು ಲಂಡನ್ ಪ್ರವಾಸ ರದ್ದಾಗಿದೆಯೆಂಬ ಮಾಹಿತಿಯನ್ನು ಮುಖ್ಯಮಂತ್ರಿಗಳ ಕಾರ್ಯಾಲಯ ಈ ಮೊದಲು ನೀಡಿತ್ತು.
ಆದರೆ, ಈಗ ಲಂಡನ್ ನಲ್ಲಿ ನಡೆಯುತ್ತಿರುವ ಉದ್ಯಮಿಗಳ ಸಭೆಗೆ ತೆರಳುವುದನ್ನು ಮಾತ್ರ ಮುಖ್ಯಮಂತ್ರಿಗಳು ರದ್ದುಪಡಿಸಿದ್ದು, ನಿಗದಿಪಡಿಸಿದಂತೆ ಆಗಸ್ಟ್ 27ರ ರಾತ್ರಿ ಅಮೆರಿಕಕ್ಕೆ ಯಡಿಯೂರಪ್ಪನವರು ವಿಮಾನವೇರಲಿದ್ದಾರೆ. ಅವರೊಡನೆ, ಮುಖ್ಯಮಂತ್ರಿಗಳ ಆಪ್ತ ಶಾಸಕರು, ಅಧಿಕಾರಿಗಳು, ಅವರ ಕುಟುಂಬದವರು, ಯಡಿಯೂರಪ್ಪನವರೊಡನೆ ಗುರುತಿಸಿಕೊಂಡಿರುವ ಕೆಲ ಕಲಾವಿದರು ಕೂಡ ಅಮೆರಿಕಕ್ಕೆ ತೆರಳಿ 'ಅಕ್ಕ' ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸುಯೋಗ ಪಡೆದಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಯಡಿಯೂರಪ್ಪ ಅಮೆರಿಕಾ ಪ್ರವಾಸ ದಿನಚರಿ
'ಅಕ್ಕ' ಸಮ್ಮೇಳನ : ಓಬಾಮಾ ನೋ, ಬಿಎಸ್ವೈ ಎಸ್
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications