ಕಸಾಯಿಖಾನೆಗೆ ಒಯ್ಯುತ್ತಿದ್ದ ಗೋರಕ್ಷಣೆ; 15 ಜನ ಬಂಧನ
ಎಚ್.ಡಿ.ಕೋಟೆ, ಆ. 25 : ಮೈಸೂರಿನ ಜಿಲ್ಲಾಡಳಿತ ನಡೆಸಿದ ಮಹತ್ವದ ಕಾರ್ಯಚರಣೆಯಲ್ಲಿ ನೂರಾರು ಗೋವುಗಳನ್ನು ಅಕ್ರಮವಾಗಿ ಬೇರೆ ರಾಜ್ಯಕ್ಕೆ ಸಾಗಾಣಿಕೆ ಮಾಡುತ್ತಿದ್ದ 18 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, 15 ಜನರನ್ನು ಬಂಧಿಸಿರುವ ಘಟನೆ ಸೋಮವಾರ ಬೆಳಕಿನ ಜಾವ 2 ಗಂಟೆ ನಡೆದಿದೆ.
ನಗರದ ಹೊರ ವಲಯ ಬೆಳ್ಳ ಗ್ರಾಮದ ಸಮೀಪ ಗೋವುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಮೈಸೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ನಡೆದ ಮಹತ್ವದ ಕಾರ್ಯಚರಣೆ ನಡೆಸಿದ್ದು, ಸುಮಾರು 18 ಲಾರಿಗಳಲ್ಲಿ ತುಂಬಿ ಸಾಗಿಸಲಾಗುತ್ತಿದ್ದ 300ಕ್ಕೂ ಹೆಚ್ಚು ಗೋವುಗಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಕೇರಳದ ವಿವಿಧಡೆ ಇರುವ ಕಸಾಯಿಖಾನೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಅಮಾಯಕ ಹಸುಗಳು ಅಕ್ರಮವಾಗಿ ಕಸಾಯಿಖಾನೆ ಪಾಲಾಗುವುದನ್ನು ತಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳ ವಿಚಾರಣೆ ಮುಂದುವರೆದಿದೆ. ಎಚ್.ಡಿ.ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಇಗ್ಗಲೂರು ಕಸಾಯಿಖಾನೆಗೆ ವಿರೋಧ; ಶಾಸಕ ಬಂಧನ