ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸೆ. 26 ರಂದು ಗುಲ್ಬರ್ಗಾದಲ್ಲಿ ಸಂಪುಟ ಸಭೆ
ಬೆಂಗಳೂರು, ಸೆ. 12 : ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಸೆ. 26 ರಂದು ಗುಲ್ಬರ್ಗಾದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಗುಲ್ಬರ್ಗಾ ಜಿಲ್ಲಾಧಿಕಾರಿಗಳೊಂದಿಗೆ ನೇರ ಸಂವಾದದಲ್ಲಿ ಮಾತನಾಡಿದ ಯಡಿಯೂರಪ್ಪ, ಸೆ. 26 ರಂದು ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದೇವೆ ಎಂದರು. ತಮ್ಮ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ರಾಜಧಾನಿಯಿಂದ ಹೊರಗೆ ಸಭೆ ನಡೆಯಲಿದ್ದು, ಉತ್ತಮವಾಗಿ ಸಂಘಟಿಸಿದ ಹೆಗ್ಗಳಿಕೆಗೆ ಪಾತ್ರರಾಗಿ ಎಂದು ಜಿಲ್ಲಾಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಆಡಳಿತ
ಚುರುಕಿಗೆ
ಪ್ರತಿ
ಗುರುವಾರ
ಸಂಪುಟ
ಸಭೆ
ಹೈಕೋರ್ಟ್
ಸಂಚಾರಿ
ಪೀಠಗಳ
ಕಲಾಪ
ಶುರು
Comments
Story first published: Friday, September 12, 2008, 12:41 [IST]