ದಿಲ್ಲಿ ಸ್ಫೋಟ : ಬಿಜಾಪುರದಲ್ಲಿ ಶಂಕಿತನ ಬಂಧನ
ಬಿಜಾಪುರ, ಸೆ. 15 : ಕಳೆದ ಶನಿವಾರ ದಿಲ್ಲಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಇಲ್ಲಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ದೆಹಲಿಯ ಪೊಲೀಸರು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ವಿದ್ಯಾರ್ಥಿಯ ಚಲನವಲನದ ಬಗ್ಗೆ ಮೊದಲೇ ಕೇಂದ್ರ ವಿಚಕ್ಷಣಾ ದಳದವರು ಮಾಹಿತಿ ಸಂಗ್ರಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಸಿಮಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಹಿಂದೆ ಅದ್ನಾನ್ ಎಂಬುವವರನ್ನು ಬಂಧಿಸಲಾಗಿತ್ತು. ಅದಲ್ಲದೇ ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಒಬ್ಬ ವೈದ್ಯ ಹಾಗೂ ಟ್ರಾವೆಲ್ ಏಜೆಂಟ್ ನನ್ನು ವಿಚಾರಣೆಗೊಳಪಡಿಸಿ ನಿರ್ದೋಷಿ ಎಂದು ಬಿಡುಗಡೆ ಮಾಡಲಾಗಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಕಳೆದ ಶನಿವಾರ ದಿಲ್ಲಿಯಲ್ಲಿ ವಿವಿಧ 5 ಕಡೆ ಸರಣಿ ಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ 31 ಜನ ಅಸುನೀಗಿದ್ದು. 150 ಕ್ಕೂ ಹೆಚ್ಚು ಗಾಯಗೊಂಡಿರುವ ಪ್ರಕರಣ ನಡೆದಿದೆ. ಇಂಡಿಯನ್ ಮುಜಾಹಿದೀನ್ ಹೆಸರಿನಲ್ಲಿ ಸಿಮಿ ಸಂಘಟನೆ ಕಾರ್ಯಕರ್ತರು ವಿಧ್ವಂಸಕ ಕೃತ್ಯದ ಹೊಣೆ ಹೊತ್ತುಕೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ದಿಲ್ಲಿ ಸ್ಫೋಟ: ನಾಲ್ಕು ಜೀವಂತ ಬಾಂಬ್ ನಿಷ್ಕ್ರಿಯ
ದಿಲ್ಲಿ ಸ್ಫೋಟ: ಸಂಚಿನ ರುವಾರಿ ತಂತ್ರಜ್ಞ ತಾಖೀರ್












Click it and Unblock the Notifications