ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗತ್ಯ ಬಿದ್ದರೆ ಹಿಂದುಪರ ಸಂಘಟನೆಗಳ ನಿಷೇಧ

By Staff
|
Google Oneindia Kannada News

ಬೆಂಗಳೂರು, ಸೆ. 17 : ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮುಗಲಭೆ ಸರ್ಕಾರದ ಪೂರ್ವನಿಯೋಜಿತ ಕೃತ್ಯವಾಗಿದೆ. ಸಮಗ್ರ ವರದಿಯ ಪರಿಶೀಲನೆಯ ನಂತರ ಅಗತ್ಯ ಬಿದ್ದರೆ ಹಿಂದುಪರ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಕಾಂಗ್ರೆಸ್ ಹಿರಿಯ ಹಾಗೂ ಅಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಸರ್ಕಾರ, ಇದೀಗ ಅದಕ್ಕೆ ಮತಾಂತರ ಲೇಪ ಬಳಿಯ ತೊಡಗಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗನಿಂದಲೂ ಅನೇಕ ಕಡೆಗಳಲ್ಲಿ ಕೋಮು ಗಲಭೆ ನಡೆಯತೊಡಗಿವೆ. ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡುವುದೇ ಅಭಿವೃದ್ಧಿ ಎನ್ನುವ ಮನಸ್ಥಿತಿಯನ್ನು ಬಿಜೆಪಿ ಸರ್ಕಾರ ಹೊಂದಿದೆ ಎಂದು ಅವರು ವ್ಯಂಗ್ಯವಾಡಿದರು.

ಮಂಗಳೂರು, ದಾವಣಗೆರೆ ಗಳಲ್ಲಿ ನಡೆದಿರುವ ಚರ್ಚ್ ಗಳ ಮೇಲಿನ ದಾಳಿಗೆ ಸರ್ಕಾರದ ಕುಮ್ಮಕ್ಕು ಇದೆ ಎಂದು ಗಂಭೀರ ಆರೋಪ ಮಾಡಿದ ಅವರು, ಮಂಗಳೂರಿನಲ್ಲಿ ಮೊಕ್ಕಾಂ ಹೂಡಿರುವ ಗೃಹ ಸಚಿವ ವಿ.ಎಸ್.ಆಚಾರ್ಯ ಪೊಲೀಸ್ ಕಾರ್ಯಕ್ಕೆ ತೊಡಕುಂಟು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರಿಗೆ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ, ಖುದ್ದು ಗೃಹ ಸಚಿವರೇ ಕೋಮು ಸೌಹಾರ್ಧವನ್ನು ಕದಡುತ್ತಿರುವುದು ವಿಷಾದನೀಯ ಸಂಗತಿ ಎಂದು ಹೇಳಿದರು.

ಗಲಭೆಯ ಕುರಿತು ವರದಿಯನ್ನು ತರಿಸಿಕೊಂಡು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಬಿದ್ದರೆ ಹಿಂದುಪರ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು. ಬಿಜೆಪಿ ಆರಂಭಿಸಿರುವ ವಿಜಯ ಸಂಕಲ್ಪ ಯಾತ್ರೆ ಸಂಪೂರ್ಣ ಹಳಿ ತಪ್ಪಿದೆ. ಅದು ಆಯೋಧ್ಯ ರ್ರ್ಯಾಲಿಯ ಎರಡನೇ ಭಾಗವಾಗಲಿದೆ, ಲೋಕಸಭೆ ಚುನಾವಣೆ ಗುರಿಯಾಗಿಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡಲು ಬಿಜೆಪಿ ಕೈಹಾಕಿದೆ ಎಂದು ಆರೋಪಿಸಿದರು.

(ದಟ್ಸ್ ಕನ್ನಡ ವಾರ್ತೆ)

ಉಜಿರೆ, ಬಾಳೆಹೊನ್ನೂರಿನಲ್ಲೂ ಚರ್ಚ್ ಧ್ವಂಸ
ಉಗ್ರರ ನಿಗ್ರಹಕ್ಕೆ ನೂತನ ಕಾಯ್ದೆ ಬೇಕು : ಮೊಯ್ಲಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X