ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ. 20 ರಿಂದ ಲಾರಿ ಮಾಲೀಕರ ಮುಷ್ಕರ

By Staff
|
Google Oneindia Kannada News

ಬೆಂಗಳೂರು, ಸೆ. 19 : ರಾಜ್ಯದಲ್ಲಿ ಮರಳು ಸಾಗಣಿಗೆ ಅನುಮತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟ ರ ಒಕ್ಕೂಟ ಸೆ. 20ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಘೋಷಿಸಿದೆ.

ಲಾರಿ ಮಾಲೀಕರ ಹಾಗೂ ಏಜಂಟ ರ ಒಕ್ಕೂಟದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮಾತನಾಡಿ, ಸೆ.20 ರಿಂದ ಮರಳು ಮತ್ತು ಕಟ್ಟಡ ,ಸಾಮಗ್ರಿ ಸಾಗಣಿಕೆ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ. ತಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಮರಳು ಮತ್ತು ಕಟ್ಟಡ ಸಾಮಗ್ರಿಗಳ ಸಾಗಣಿಕೆಗೆ ಪರವಾನಿಗೆ ನೀಡಬೇಕು. ಮರಳು ಸಾಗಣಿದಾರರ ಮೇಲೆ ಪೊಲೀಸರು ದೌರ್ಜನ್ಯ ಮುಂದುವರೆಸಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ವಾಣಿಜ್ಯ ವಾಹನಗಳಿಗೆ ವೇಗ ನಿಯಂತ್ರಕ ಕಡ್ಡಾಯ ಎನ್ನುವ ಸರ್ಕಾರದ ಆದೇಶವನ್ನು ವಿರೋಧಿಸಿರುವ ಒಕ್ಕೂಟ ಸೆ. 30ರಿಂದ ಎಲ್ಲಾ ವಾಣಿಜ್ಯ ವಾಹನಗಳ ಸಂಚಾರ ಸ್ಥಗಿತಗೊಳಿಸಲಿದೆ ಎಂದು ಷಣ್ಮುಗಪ್ಪ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X