ಭಜರಂಗದಳದ ರಾಜ್ಯ ಸಂಚಾಲಕರ ಬಂಧನ
ಮಂಗಳೂರು, ಸೆ.20: ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಭಜರಂಗದಳದ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಮಂಗಳೂರು, ಉಡುಪಿ ಹಾಗೂ ಚಿಕ್ಕಮಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹೇಂದ್ರ ಅವರನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾಳಿಯನ್ನು ಸ್ವತಃ ಮಹೇಂದ್ರಕುಮಾರ್ ಅವರೇ ಒಪ್ಪಿಕೊಂಡಿದ್ದರೂ ಗೃಹ ಸಚಿವ ವಿ.ಎಸ್.ಆಚಾರ್ಯ ಸಾಕ್ಷಾಧಾರಗಳ ಕೊರತೆಯ ಕಾರಣ ಬಂಧನಕ್ಕೆ ನಿರಾಕರಿಸಿದ್ದರು.
ಕೇಂದ್ರ ಸರ್ಕಾರದಿಂದ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸರು ಮಹೇಂದ್ರ ಕುಮಾರ್ ಅವರನ್ನು ಹುಡುಕುತ್ತಿದ್ದರು. ಆಗುಂಬೆಯಲ್ಲಿ ಶುಕ್ರವಾರ ಬೆಳಗ್ಗೆ ತಪ್ಪಿಸಿಕೊಂಡ ಮಹೇಂದ್ರ ಅವರನ್ನು ಮಧ್ಯರಾತ್ರಿಯ ನಂತರ ಮಂಗಳೂರಿನಲ್ಲಿ ಬಂಧಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಕ್ರೈಸ್ತರಿಂದ ಭಜರಂಗದಳಕ್ಕೆ ಪರ್ಯಾಯ ಸಂಘಟನೆ
ಧೈರ್ಯವಿದ್ದರೆ ಸಂಘಪರಿವಾರವನ್ನು ನಿಷೇಧಿಸಿ
ಚರ್ಚ್ ಮೇಲಿನ ದಾಳಿ ನಿಲ್ಲಿಸದಿದ್ದರೆ ಶಿಸ್ತು ಕ್ರಮ












Click it and Unblock the Notifications