ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಪದವಿಗೆ ಚ್ಯುತಿ ತಂದ ಯಡಿಯೂರಪ್ಪ

By Staff
|
Google Oneindia Kannada News

ಮೈಸೂರು, ಸೆ. 23 : ಬಾಲಿಶತನದ ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಪದವಿಗೆ ಯಡಿಯೂರಪ್ಪ ದಕ್ಕೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜಕೀಯ ಇತಿಹಾಸದಲ್ಲಿ ಒಬ್ಬ ಮುಖ್ಯಮಂತ್ರಿ ತನ್ನ ಆಡಳಿತದ ವೈಫಲ್ಯವನ್ನು ಒಪ್ಪಿಕೊಂಡ ಮೂದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಯಡಿಯೂರಪ್ಪ ಅವರಿಗೆ ಸಲ್ಲಬೇಕು ಎಂದು ವ್ಯಂಗ್ಯವಾಡಿದರು. ಚರ್ಚ್ ದಾಳಿಯ ಹಿನ್ನೆಲೆಯಲ್ಲಿ ಸಂಸದ ಸಾಗ್ಲಿಯಾನ ಮತ್ತು ನ್ಯೂಲೈಫ್ ಮುಖ್ಯಸ್ಥ ಸ್ಯಾಮ್ಯುಯೆಲ್ ಅವರ ಮೇಲೆ ನಿಗಾ ವಹಿಸಿ ಎಂದು ಸಾರ್ವಜನಿಕವಾಗಿ ಆದೇಶ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ಮುಖ್ಯಮಂತ್ರಿ ಪದವಿಯಲ್ಲಿರುವ ವ್ಯಕ್ತಿ ತಾಳ್ಮೆ ಹಾಗೂ ಸಹನೆಯಿಂದ ವರ್ತಿಸಬೇಕು. ಆದರೆ ಯಡಿಯೂರಪ್ಪ ಮಾಡಿರುವುದು ಏನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ತಮ್ಮ ಜನಾಂಗದ ಆಗಿರುವ ಅನ್ಯಾಯವಾಗಿರುವುದನ್ನು ಪ್ರತಿಭಟಸಿದರೆ ಅದು ಪ್ರಚೋದನಾಕಾರಿ ಹೇಳಿಕೆ ಎನ್ನುವುದು ಅವಿವೇಕತನದ ಪರಮಾವಧಿ. ಯಡಿಯೂರಪ್ಪ ಮುಖ್ಯಮಂತ್ರಿ ಪದವಿಗೆ ತಕ್ಕಂತೆ ವರ್ತಿಸಲಿ. ತಮ್ಮ ಮೇಲಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಲಿ. ಅದನ್ನು ಬಿಟ್ಟು ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸುವುದು ತರವಲ್ಲ ಎಂದು ಕಿವಿ ಮಾತು ಹೇಳಿದರು.

ತುರ್ತುಪರಿಸ್ಥಿತಿ ಇದ್ದಾಗಲೂ ಕೂಡ ಇಂತಹ ವಾತಾವರಣ ಸೃಷ್ಟಿಯಾಗಿರುವುದಿಲ್ಲ. ಅಂತಹ ವಾತಾವರಣ ಮುಖ್ಯಮಂತ್ರಿಯ ಹೇಳಿಕೆಯಿಂದ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಇಲ್ಲ. ಪ್ರತಿ ದಿನ ಚರ್ಚ್ ಮೇಲೆ ದಾಳಿ ನಡೆಯತೊಡಗಿವೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ಹೇರುವುದು ಸೂಕ್ತ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ
ರಾಜ್ಯದಲ್ಲಿ 355 ನೇ ವಿಧಿ ಜಾರಿ ಸಂಭವ ?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X