ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಂಗರ ರಾಜಧಾನಿ ಕುರಿತ ವಿಚಾರ ಸಂಕಿರಣ

By Staff
|
Google Oneindia Kannada News

ಬೆಂಗಳೂರು, ಸೆ.25: ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದಲ್ಲಿ ಸೆಪ್ಟೆಂಬರ್ 26 ರಂದು "ಗಂಗರ ರಾಜಧಾನಿ ಮಾನ್ಯಪುರ" ಕುರಿತ ವಿಚಾರ ಸಂಕಿರಣವನ್ನು ವ್ಯವಸ್ಥೆಗೊಳಿಸಲಾಗಿದೆ.

ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದೊಂದಿಗೆ ರಾಜ್ಯ ವಾರ್ತಾ ಇಲಾಖೆ ಆಯೋಜಿಸಿರುವ ಈ ವಿಚಾರ ಸಂಕಿರಣದಲ್ಲಿ ಖ್ಯಾತ ಇತಿಹಾಸ ತಜ್ಞ ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಡಾ ಹೆಚ್.ಎಸ್. ಗೋಪಾಲ ರಾವ್ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ.

ಪತಂಜಲಿ ಯೋಗಾಶ್ರಮ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಯೋಗಿ ಅವರು ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಕನ್ನಡದ ಹೆಸರಾಂತ ಸಾಹಿತಿ ತ್ಯಾಮಗೊಂಡ್ಲು ಅಂಬರೀಷ್, ಹಿರಿಯ ಪತ್ರಕರ್ತ ಎಂ.ವಿ. ನೆಗಳೂರು, ಹೊಯ್ಸಳ ಯುವಕ ಸಂಘದ ಅಧ್ಯಕ್ಷ ಹರ್ಷ ಅವರೂ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಿದ್ದಾರೆ.

(ದಟ್ಸ್ ಕನ್ನಡ ಸಭೆ ಸಮಾರಂಭ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X