ಕರ್ನಾಟಕ ಮಾಜಿ ಡಿಜಿಪಿ ಶ್ರೀನಿವಾಸನ್ ನಿಧನ
ಬೆಂಗಳೂರು, ಅ.4: ಕರ್ನಾಟಕ ಮಾಜಿ ಪೊಲೀಸ್ ಮಹಾ ನಿರ್ದೇಶಕ ಕೆ.ಆರ್. ಶ್ರೀನಿವಾಸನ್ ಬೆಂಗಳೂರಿನಲ್ಲಿ ಶನಿವಾರ ನಿಧನರಾದರು. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1972ನೇ ತಂಡದ ಐಪಿಎಸ್ ಅಧಿಕಾರಿಯಾಗಿದ್ದ ಅವರಿಗೆ 61 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ಅವರನ್ನು 2000ನೇ ವರ್ಷದಲ್ಲಿ ಕಾಡುಗಳ್ಳ ವೀರಪ್ಪನ್ ಅಪಹರಿಸಿದಾಗ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಉತ್ತಮ ಸಂಧಾನಕಾರರಾಗಿ ವ್ಯವಹಸಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications