ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜಮೀನು ವಿವಾದ : ದುರ್ಗದಲ್ಲಿ ಒಬ್ಬನ ಹತ್ಯೆ
ಚಿತ್ರದುರ್ಗ, ಅ. 6 : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಳೆ ವೈಷಮ್ಯೆ ಭುಗಿಲೆದ್ದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಭೀಕರ ಮಾರಾಮಾರಿಯಲ್ಲಿ ಒಬ್ಬ ಮೃತಪಟ್ಟು, 5 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಮೀಪ ಬೋರನಹಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗುರುವಯ್ಯ ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ಗಾಯಗೊಂಡಿರುವ ರಮೇಶ್, ನಿಂಗಯ್ಯ, ತಿಪ್ಪೇಸ್ವಾಮಿ ಹಾಗೂ ನಾಗಯ್ಯ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಅನೇಕ ದಿನಗಳಿಂದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಈ ಎರಡು ಕುಟುಂಬಗಳ ನಡುವೆ ಆಗಾಗ ಸಂಘರ್ಷಗಳು ನಡೆಯುತ್ತಿದ್ದವು. ಜಮೀನಿನ ವಿವಾದ ಜೊತೆಗೆ ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತಿ ಉಪಚುನಾವಣೆಯು ಈ ಜಗಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ಇನ್ನೊಂದು ಗುಂಪಿನ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, October 6, 2008, 13:19 [IST]