ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಗೇನಕಲ್ ಜಂಟಿ ಸಮೀಕ್ಷೆಗೆ ರಾಜ್ಯದ ಸ್ವಾಗತ

By Staff
|
Google Oneindia Kannada News

ಬೆಂಗಳೂರು, ಅ. 18 : ತಮಿಳುನಾಡು ಸರ್ಕಾರ ಹೊಗೇನಕಲ್ ನಲ್ಲಿ ಕೈಕೊಂಡಿರುವ ವಿವಾದಾತ್ಮಕ ಕಾವೇರಿ ಕುಡಿಯುವ ನೀರು ಯೋಜನೆಯ ಜಂಟಿ ಸಮೀಕ್ಷೆಯನ್ನು ನಡೆಸುವ ಕೇಂದ್ರದ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ರಾಜ್ಯ ಕಾರ್ಮಿಕ ಇಲಾಖೆ ಆಯೋಜಿಸಿರುವ 'ಉದ್ಯೋಗ ಮೇಳ'ವನ್ನು ಉದ್ಘಾಟಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಯಡಿಯೂರಪ್ಪ, ಈ ಸಮೀಕ್ಷೆಯಿಂದ ಹೊಗೇನಕಲ್ ಗೆ ಸಂಬಂಧಿಸಿದಂತೆ ಸತ್ಯ ಹೊರ ಬೀಳಲಿದೆ, ಯೋಜನೆಯನ್ನು ವಿರೋಧಿಸಿದ ಕರ್ನಾಟಕದ ಹೋರಾಟಕ್ಕೆ ಸಮರ್ಥನೆ ಸಿಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಕೇಂದ್ರ ಪ್ರಪ್ರಥಮ ಬಾರಿಗೆ ರಾಜ್ಯದ ಕಳಕಳಿಗೆ ಸಕಾರಾತ್ಮಕವಾಗಿ ಪ್ರತಿಸ್ಪಂದಿಸಿದೆ. ಜಂಟಿ ಸಮೀಕ್ಷೆಗಾಗಿ ಕೇಂದ್ರಕ್ಕೆ ಎಲ್ಲ ರೀತಿಯ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಅವರು ಹೇಳಿದರು.

ತಮಿಳುನಾಡು ಸರ್ಕಾರ ಕರ್ನಾಟಕದ ಭಾಗದಲ್ಲಿರುವ ಗಡಿಯಲ್ಲಿ ಯೋಜನೆ ಕೈಗೊಳ್ಳುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇನ್ನಿತರ ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಟಕ್ಕಿಳಿದಿದ್ದರಿಂದ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಯೋಜನೆಯನ್ನು ಸ್ಥಗಿತಗೊಳಿಸಿದ್ದರು.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X