ಕಲ್ಬುರ್ಗಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬಹಿಷ್ಕಾರ
ಕಲ್ಬುರ್ಗಿ, ಅ. 28 : ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಲಂ 371 ನ್ನು ಜಾರಿಗೊಳಿಸುವಲ್ಲಿ ವಿಫಲವಾಗಿರುವ ಕೇಂದ್ರದ ಕ್ರಮವನ್ನು ಖಂಡಿಸಿ ನವೆಂಬರ್ 1 ರಂದು ಆಚರಿಸಲಾಗುವ 'ಕನ್ನಡ ರಾಜ್ಯೋತ್ಸವ'ವನ್ನು ಬಹಿಷ್ಕರಿಸುವುದರ ಜೊತೆಗೆ ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ್ ಪಾಟೀಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ನಗರದ ರೈಲು ನಿಲ್ದಾಣದಲ್ಲಿ ರೈಲು ರೋಕೋ ನಡೆಸುವ ಮೂಲಕ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರಕ್ಕೆ ಸರ್ಕಾರಕ್ಕೆ ಇನ್ನೊಂದು ಎಚ್ಚರಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಕೇಂದ್ರದ ಮಲತಾಯಿ ಧೋರಣೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯೋತ್ಸವ ದಿನದಂದು ಪ್ರತ್ಯೇಕ ರಾಜ್ಯದ ಧ್ವಜವನ್ನು ಹಾರಿಸಲಾಗುವುದು ಎಂದು ಪಾಟೀಲ್ ಸ್ಪಷ್ಟಪಡಿಸಿದರು.
ನವೆಂಬರ್ ಒಂದರಂದು ರೈಲು ತಡೆ ನಡೆಸಲಾಗುವುದು. ಹಾಗೂ ಅಂದೇ ಹೋರಾಟ ಸಮಿತಿಯ ಸದಸ್ಯರು ನವದೆಹಲಿಯ ಸಂಸತ್ ಎದುರು ಪ್ರತಿಭಟನೆ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೈಜನಾಥ್ ಪಾಟೀಲ್ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಕಲ್ಯಾಣ
ಕರ್ನಾಟಕಕ್ಕೆ
ಬಂಪರ್
ಕೊಡುಗೆ
ಗುಲ್ಬರ್ಗಾ
ಸಿಮಿ
ಸಂಘಟನೆಯ
ಸ್ವರ್ಗ?
ಹೈದರಾಬಾದ್
ಕರ್ನಾಟಕಕ್ಕೆ
ನ್ಯಾಯ
ದೊರಕೀತೆ?