ಚಿತ್ರದುರ್ಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಚಿತ್ರದುರ್ಗ, ನ. 6 : ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನ ಚಿತ್ರದುರ್ಗದಲ್ಲಿ ಜ.29 ರಿಂದ ಫೆ. 1ರ ವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ ತಿಳಿಸಿದರು. ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಸಮಾಲೋಚನೆ ಸಭೆಯಲ್ಲಿ ಈ ವಿಷಯವನ್ನು ಅವರು ಪ್ರಕಟಿಸಿದರು.
ಉಡುಪಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳವನ್ನು ಚಿತ್ರದುರ್ಗದಲ್ಲಿ ನಡೆಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿತ್ತು. ಪರಿಷತ್ತು ಈಗಲೂ ಅದಕ್ಕೆ ಬದ್ದವಾಗಿದೆ ಎಂದು ಪ್ರಸಾದ್ ಸ್ಪಷ್ಟಪಡಿಸಿದರು. ಸಮಾಲೋಚನೆ ಸಭೆಯ ಸಾನಿಧ್ಯ ವಹಿಸಿದ್ದ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಒದಗಿ ಬಂದಿದೆ. ಇಂತಹ ಅಪರೂಪದ ಸಂದರ್ಭವನ್ನು ಯಾರು ಕಳೆದುಕೊಳ್ಳಬಾರದು. ಎಲ್ಲ ಕಾಲದಲ್ಲಿ ವಿಘ್ನಗಳು ಇರುತ್ತವೆ. ಆದರೆ ಉಪಕಾರ ಮಾಡಲು ಸಾಧ್ಯವಾಗದಿದ್ದರೆ ಒಂದೆರೆಡು ಒಳ್ಳೇಯ ಮಾತುಗಳನ್ನು ಆಡಿದರೆ ಸಾಕು ಎಂದು ಕಿವಿ ಮಾತು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)