ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರರ ಮಟ್ಟಹಾಕಲು ಪೊಲೀಸರಿಗೆ ಪ್ರಧಾನಿ ಕರೆ

By Staff
|
Google Oneindia Kannada News

ನವದೆಹಲಿ, ನ. 23 : ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯವನ್ನು ಹತ್ತಿಕ್ಕಲು ಪೊಲೀಸರು ಇನ್ನಷ್ಟು ಹೋರಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಪೊಲೀಸರಿಗೆ ಬೇಕಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭರವಸೆ ನೀಡಿದರು.

ವಿವಿಧ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಉನ್ನತಮಟ್ಟದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಡದ ಶಾಂತಿ ಕಡದುವ ಯಾರೇ ಆದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು. ಕಳೆದ ಎರಡು ವರ್ಷಗಳಿಂದ ದೇಶದಲ್ಲಿ ಅನೇಕ ಸಂಖ್ಯೆ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿ ಹಲವಾರು ಅನೇಕರನ್ನು ಬಲಿತೆಗೆದುಕೊಳ್ಳಲಾಗಿದೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಏನೂ ತಪ್ಪು ಮಾಡದ ಅಮಾಯಕರಿಗೆ ಶಿಕ್ಷೆ ನೀಡುತ್ತಿರುವ ಭಯೋತ್ಪಾದಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಭಯೋತ್ಪಾದಕರನ್ನು ಹತ್ತಿಕ್ಕುವಲ್ಲಿ ಪೊಲೀಸರ ಪಾತ್ರ ಮಹತ್ವಾದ್ದಾಗಿದೆ. ಸಮಾಜವನ್ನು ರಕ್ಷಿಸುವ ಸಂಪೂರ್ಣ ಜವಾಬ್ದಾರಿ ಪೊಲೀಸರ ಮೇಲಿದೆ. ಈ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕಿದೆ. ರಾಜ್ಯದ ಗುಪ್ತಚರ ಇಲಾಖೆಯನ್ನು ಇನ್ನಷ್ಟು ಗಟ್ಟಿಗೊಳಿಸಿ, ಜತೆಗೆ ಈ ಇಲಾಖೆಗೆ ಚುರುಕಿನಿಂದ ಕೆಲಸ ಬೇಕಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X