ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಸೀದಿಯಲ್ಲಿ ಗುಣಿ ತೋಡುತ್ತಿದ್ದ ವ್ಯಕ್ತಿಯ ಬಂಧನ

By Staff
|
Google Oneindia Kannada News

ಬೆಂಗಳೂರು, ಡಿ. 4 : ಪ್ರಾರ್ಥನಾ ಪ್ರದೇಶದಲ್ಲಿ ಬೆಳಗಿನ ಜಾವ ಗುಣಿ ತೋಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಜರುಗಿದೆ.

ಇಲ್ಲಿಂದ 20 ಕಿ.ಮೀ. ದೂರದಲ್ಲಿರುವ ಉಚಿಲ ಎಂಬಲ್ಲಿ ಸೈಯದ್ ಅರಬಿ ಜುಮ್ಮಾ ಮಸೀದಿಯಲ್ಲಿ ಬೆಳಗಿನ ಜಾವದಲ್ಲಿ ಉದಯ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿ ಗುಣಿ ತೋಡುತ್ತಿದ್ದ. ನಿತ್ಯ ಪ್ರಾರ್ಥನಾ ಸ್ಥಳಕ್ಕೆ ಭೇಟಿ ನೀಡುವವರೊಬ್ಬರು ಗುಣಿ ತೋಡುತ್ತಿರುವುದೇಕೆಂದು ವಿಚಾರಿಸಿದಾಗ, ದೇವರ ಮೂರ್ತಿ ಇಡಲೆಂದು ಹೇಳಿದ್ದಾನೆ.

ಇತರ ಜನರೂ ಸೇರಿ ಮತ್ತಷ್ಟು ವಿಚಾರಿಸಿದಾಗ ತಾನು ಉತ್ತರ ಪ್ರದೇಶದವನಾಗಿದ್ದು, ಬಾಂಬ್ ಇಡುತ್ತಿರುವುದಾಗಿ ಹೇಳಿದ್ದಾನೆ. ಸಾರ್ವಜನಿಕರು ಆತನನ್ನು ತಕ್ಷಣ ಪೊಲೀಸರಿಗೆ ಒಪ್ಪಿಸಿದ್ದಾರೆ. 40 ವರ್ಷ ವಯಸ್ಸಿನ ಆತ ಮಾನಸಿಕವಾಗಿ ಅಸ್ವಸ್ಥನಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೂ, ಅವನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X