ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದ ಮೂರು ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ

By Staff
|
Google Oneindia Kannada News

ನವದೆಹಲಿ, ಡಿ.6:ಭಯೋತ್ಪಾದಕರ ಭೀತಿ ಹಾಗೂ ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿ,ಬೆಂಗಳೂರು ಮತ್ತು ಚೆನ್ನೈವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಡಿ.3ರಂದು ನಾಗರಿಕ ವಿಮಾನ ಯಾನ ಕಾರ್ಯಾಲಯಕ್ಕೆ ಈ ಬೆದರಿಕೆ ಇ ಮೇಲ್ ಬಂದಿತ್ತು.ಅದರಲ್ಲಿ ಡಿ.6ರಂದು ವಿಮಾನಗಳನ್ನು ಅಪಹರಿಸುವುದಾಗಿ ಬೆದರಿಕೆ ಒಡ್ಡಲಾಗಿತ್ತು.ಹಾಗಾಗಿ ಈ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಭದ್ರತಾ ತಪಾಸಣೆಗಾಗಿ ಮೂರು ಗಂಟೆ ಮುಂಚಿತವಾಗಿಯೇ ವಿಮಾನ ನಿಲ್ದಾಣಕ್ಕೆ ಬರಬೇಕು ಎಂದು ಪ್ರಯಾಣಿಕರಿಗೆ ಸೂಚಿಸಲಾಗಿದೆ. ಕೈಚೀಲಗಳನ್ನು ಕ್ಷ-ಕಿರಣದ ಮೂಲಕ ಪರೀಕ್ಷಿಸಲಾಗುತ್ತಿದೆ.ವಿಮಾನ ನಿಲ್ದಾಣಕ್ಕೆ ಬರುವ ಕಾರುಗಳನ್ನು ಅಮೂಲಾಗ್ರವಾಗಿ ಪರಿಶೀಲಿಸಲಾಗುತ್ತಿದೆ. ಸಿಐಎಸ್ ಎಫ್, ಎನ್ ಎಸ್ ಜಿ ಕಮಾಂಡೋಗಳು ಈ ಮೂರು ವಿಮಾನ ನಿಲ್ದಾಣಗಳಲ್ಲಿ ಭದ್ರತಾ ಕಾರ್ಯದಲ್ಲಿ ನಿಮಗ್ನರಾಗಿದ್ದಾರೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X