ಹೊಗೆನಕಲ್ ವಿವಾದ,ಜ. 24 ರಂದು ರೈಲು ತಡೆ
ಬೆಂಗಳೂರು, ಡಿ. 9 : ತಮಿಳುನಾಡು ಸರ್ಕಾರ ಹೊಗೇನಕಲ್ ಯೋಜನೆ ನೀಡಿರುವ ಚಾಲನೆ ವಿರೋಧಿಸಿ ಜ. 24 ರಂದು ರಾಜ್ಯಾದ್ಯಂತ 24 ಗಂಟೆಗಳ ಕಾಲ ರೈಲು ತಡೆ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗಾರಾಜ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಯೋಜನೆಯ ಸ್ಥಗಿತಕ್ಕೆ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಯೊಜನೆಯ ಅನುಷ್ಠಾನಕ್ಕೆ ತಮಿಳನಾಡು ಸರ್ಕಾರ ವಿಶೇಷ ಅಧಿಕಾರಿಗಳನ್ನು ನೇಮಿಸಿ ಅನುದಾನವನ್ನೂ ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಿಲುವನ್ನು ಖಂಡಿಸಿ ಕರ್ನಾಟಕ ಗಡಿ ರಕ್ಷಣ ಸಮಿತಿಯ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಗುಲ್ಬರ್ಗಾ ಬಂದ್
ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಾಗೂ ಸಂವಿಧಾನದ 371 ನೇ ವಿಧಿಯ ರದ್ದು ಮಾಡುವಂತೆ ಒತ್ತಾಯಿಸಿ ಡಿ. 10 ಗುಲ್ಬರ್ಗಾ ಬಂದ್ ನಡೆಸಲಾಗುವುದು ಎಂದು ಕನ್ನಡ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೆ. ಕುಮಾರ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)