ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೇಜಾವರ ಮಠಕ್ಕೆ 2 ಕೋಟಿ ಅನುದಾನ

By Staff
|
Google Oneindia Kannada News

ಬೆಂಗಳೂರು, ಡಿ. 11 : ಮೈಸೂರು ಮತ್ತು ಉಡುಪಿಯಲ್ಲಿ ಪೇಜಾವರ ಮಠ ನಿರ್ಮಿಸಲಿರುವ ಬಡ ವಿದ್ಯಾರ್ಥಿ ವಸತಿ ನಿಲಯಕ್ಕೆ ಸರಕಾರದ ವತಿಯಿಂದ ಎರಡು ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳ ಸನ್ಯಾಸತ್ವ ಸ್ವೀಕರಿಸಿದ 70 ನೇ ವರ್ಷದ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ದಿಗೆ ಕೂಡ ಎರಡು ಕೋಟಿ ರೂಪಾಯಿಗಳನ್ನು ಪ್ರಕಟಿಸಿದ್ದಾರೆ. ಶೀಘ್ರವೇ ಸರಕಾರದ ವತಿಯಿಂದ 25 ಕೋಟಿ ರುಪಾಯಿ ವೆಚ್ಚದಲ್ಲಿ ತಿರುಪತಿಯಲ್ಲಿ ಸ್ಥಾಪಿಸಲಾಗುವ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ನಂತರ ಮಾತನಾಡಿದ ಪೇಜಾವರ ಶ್ರೀಗಳು, ಸರಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಭಯೋತ್ಪಾದನೆಯ ವಿರುದ್ದದ ವಿಷಯದ ಬಗ್ಗೆ ಶಾಲಾ ಪಠ್ಯದಲ್ಲಿ ಅಳವಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೈಸೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯಾರ್ಥಿ ವಸತಿ ನಿಲಯ ಸ್ಥಾಪಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ಮಠಾಧೀಶರೆ ಸರ್ಕಾರದೊಂದಿಗೆ ಕೈಜೋಡಿಸಿ
ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ 65 ಕೋಟಿ ರು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X