ಎಟಿಎಸ್ ನ ಕರ್ಕರೆ ಕೊಂದಿದ್ದು ಹಿಂದುಗಳೆ ?
ಇಡೀ ದೇಶವೇ ಆಶ್ಚರ್ಯ ಮತ್ತು ನಿಬ್ಬೆರಗಾಗುವಂತ ಮಹತ್ವದ ಪ್ರಕರಣವನ್ನು ಭೇದಿಸಿದ ಕೀರ್ತಿ ಹೇಮಂತ್ ಕರ್ಕರೆಗೆ ಸಲ್ಲಬೇಕು. ಇಷ್ಟು ದಿನ ಭಯೋತ್ಪಾದನೆ ಕೃತ್ಯದಲ್ಲಿ ತೊಡಗಿರುವವರು ಬರೀ ಮುಸ್ಲಿಮರು ಎಂದು ತಿಳಿದುಕೊಂಡಿದ್ದ ಭಾರತೀಯರಿಗೆ ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಪರಿಚಯ ಮಾಡಿಕೊಟ್ಟ ಸೂಪರ್ ಅಧಿಕಾರಿ ಕರ್ಕರೆ ಎಂದು ಅಂತುಳೆ ವಾರ್ತಾ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಕೊಂಡಾಡಿದ್ದಾರೆ.
ಜೀವದ ಹಂಗನ್ನೇ ತೊರೆದ ಹೇಮಂತ್ ಕರ್ಕರೆ ಇದೇ ವರ್ಷ ಸೆ. 29 ರಂದು ನಡೆದ ಮಾಲೇಗಾಂವ್ ಸ್ಫೋಟದಲ್ಲಿ ಹಿಂದು ಮೂಲಭೂತವಾದಿಗಳ ಕೈವಾಡವಿರುವುದನ್ನು ಹೊರಗೆಳೆದಿದ್ದರು. ಇದು ಕೆಲ ಹಿಂದುಪರ ಸಂಘಟಗಳಿಗೆ ತೀವ್ರ ಇರಿಸುಮುರಿಸು ಉಂಟು ಮಾಡಿತ್ತು. ಕರ್ಕರೆ ವಿರುದ್ಧ ಅನೇಕ ಟೀಕೆ ಟಿಪ್ಪಣಿಗಳು ಕೇಳಿ ಬಂದಿರುವುದು ಗೊತ್ತಿರುವ ಸಂಗತಿ ಎಂದು ಅಂತುಳೆ ಹೇಳಿದರು.
ನವೆಂಬರ್ 26ರಂದು ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಹೇಮಂತ್ ಕರ್ಕರೆ ಉಗ್ರರಿಂದ ಹತರಾದರೆ? ಅಥವಾ ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಅಸಹನೆಯಿಂದ ಕುದಿಯುತ್ತಿದ್ದ ಹಿಂದುಪರ ಸಂಘಟನೆಗಳು ಈ ಕೃತ್ಯ ನಡೆಸಿದವೆ ಎನ್ನುವುದು ಸ್ಪಷ್ಟವಾಗಬೇಕಿದೆ ಎಂದು ಸಚಿವ ಎ ಆರ್ ಅಂತುಳೆ ಪ್ರಶ್ನಿಸಿದ್ದಾರೆ. ಸಚಿವರ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಮಾಲೇಗಾಂವ್ ಸ್ಫೋಟದಲ್ಲಿ 30 ಮಂದಿ ಮೃತಪಟ್ಟು ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಪ್ರಕರಣದಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್, ಸೇನಾಧಿಕಾರಿ ಶೀಕಾಂತ್ ಪ್ರಸಾದ್ ಪುರೋಹಿತ್, ದಯಾನಂದ ಪಾಂಡೆ ಅವರ ಕೈವಾಡವಿದೆ ಎಂದು ಹೇಮಂತ್ ಕರ್ಕರೆ ಅವರನ್ನು ಬಂಧಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ
ಓದಿಗೆ
ಹುತಾತ್ಮ
ಯೋಧರಿಗೆ
3
ಕೋಟಿ
ಪರಿಹಾರ:ಬಿಸಿಸಿಐ
ಪುರೋಹಿತ್
ನನ್ನು
ನಮಗೆ
ಕೊಡಿ
:ಪಾಕ್
ಸಾಧ್ವಿಗೆ
ಪ್ರಗ್ಯಾಗೆ
ನಾರ್ಕೋಅನಾಲಿಸಿಸ್
ಪರೀಕ್ಷೆ