ಸುಪ್ರಿಂಕೋರ್ಟ್ ನ್ಯಾಯಮೂರ್ತಿಯಾಗಿ ಕನ್ನಡಿಗ
ನವದೆಹಲಿ, ಡಿ, 18 : ಕನ್ನಡಿಗ ಎಚ್ ಎಲ್ ದತ್ತು ಅವರು ಸುಪ್ರಿಂಕೋರ್ಟ್ ನ್ಯಾಯಾಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಇದುವರೆಗೆ ಕೇರಳ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇವರ ಜತೆಯಲ್ಲೇ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಶೋಕ್ ಕುಮಾರ್ ಗಂಗೂಲಿ, ಪಟನಾ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ ಆರ್ ಎಂ ಲೋಧಾ ಕೂಡ ಸುಪ್ರಿಕೋರ್ಟ್ ನ್ಯಾಯಮೂರ್ತಿಗಳಾಗಿ ಅಧಿಕಾರಿ ಸ್ವೀಕರಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications