ಫೆಬ್ರವರಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ
ಬೆಳಗಾವಿ. ಡಿ. 21 : ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬಹುನಿರೀಕ್ಷಿತ ವಿಶ್ವ ಕನ್ನಡ ಸಮ್ಮೇಳನ ಮುಂದಿನ ಫೆಬ್ರವರಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಹೇಳಿದರು.
ಬೆಳಗಾವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಶೀಘ್ರ ಸಂಪುಟದಲ್ಲಿ ಚರ್ಚಿಸಲಾಗುವುದು. ಬೆಳಗಾವಿಯಲ್ಲಿ ಜನವರಿ 16 ರಿಂದ 10 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲದ ಅಧಿವೇಶನದ ವೇಳೆ ವಿಶ್ವ ಕನ್ನಡ ಸಮ್ಮೇಳನದ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದರು.
ಲೋಕಸಭೆ ಚುನಾವಣೆಯನ್ನು ಫೆಬ್ರುವರಿಯಲ್ಲಿ ನಡೆಯಲು ಆಯೋಗ ಚಿಂತನೆ ನಡೆಸಿತ್ತು. ಈ ಕಾರಣದಿಂದ ವಿಶ್ವ ಕನ್ನಡ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಂಡಿರಲಿಲ್ಲ. ಇದೀಗ ಲೋಕಸಭೆ ಚುನಾವಣೆಯನ್ನು ಏಪ್ರಿಲ್ ನಲ್ಲಿ ನಡೆಸಲು ಆಯೋಗ ನಿರ್ಧರಿಸಿರುವುದರಿಂದ ವಿಶ್ವ ಕನ್ನಡ ಸಮ್ಮೇಳನವನ್ನು ಫೆಬ್ರುವರಿಯಲ್ಲಿ ನಡೆಸಲು ಯಾವುದೇ ಇಲ್ಲ. ಫೆಬ್ರವರಿ ಹೊತ್ತಿಗೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದರೂ ನೀತಿ ಸಂಹಿತೆ ಅಡ್ಡಿಯುಂಟು ಮಾಡದು. ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್
ಕನ್ನಡ
ವಾರ್ತೆ)
ಬೆಳಗಾವಿಯಲ್ಲಿ
ವಿಧಾನಮಂಡಲ
ಅಧಿವೇಶನ