ಉಗ್ರರನ್ನು ಬಂಧಿಸಿ ಇಲ್ಲವೇ ಯುದ್ಧ ಎದುರಿಸಿ
ನವದೆಹಲಿ, ಡಿ. 24 : ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಪಾಕಿಸ್ತಾನ-ಅಪಘಾನಿಸ್ತಾನದ ಗಡಿಭಾಗದಲ್ಲಿರುವ ಉಗ್ರರ ನೆಲೆಯನ್ನು ನಾಶಪಡಿಸಬೇಕು ಹಾಗೂ ಭಾರತಕ್ಕೆ ಬೇಕಿರುವ ಉಗ್ರರನ್ನು ಕೂಡಲೇ ಹಸ್ತಾಂತರಿಸಬೇಕು ಎಂದು ಭಾರತ ತನ್ನ ಬಿಗಿಪಟ್ಟು ಮುಂದುವರೆಸಿದೆ. ಇದಕ್ಕೆ ಭಾರತ ಡಿಸೆಂಬರ್ 26ರ ವರೆಗೆ ಅಂತಿಮ ಗಡುವು ನೀಡಿದ್ದು, ತಪ್ಪಿದ್ದಲ್ಲಿ ಪಾಕ್ ವಿರುದ್ಧ ಯುದ್ಧ ಘೋಷಿಸುವ ಎಲ್ಲ ಸಾಧ್ಯತೆಗಳು ಇವೆ ಎಂದು ಜಾಗತಿಕ ರಾಜಕೀಯ ಗುಪ್ತಚರ ಸಂಸ್ಥೆ ಸ್ಟ್ರಾಟ್ ಫಾರ್ ಸ್ಪಷ್ಪಡಿಸಿದೆ.
ಅಮೆರಿಕದ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಈ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಕಳೆದ ನವೆಂಬರ್ 26 ರಂದು ಮುಂಬೈನಲ್ಲಿ ನಡೆದ ಭಯೋತ್ಪಾದನೆಗೆ ಸಂಬಂಧಿಸಿದ ಉಗ್ರರನ್ನು ಬಂಧಿಸಬೇಕು, ಭಾರತಕ್ಕೆ ಬೇಕಿರುವ ಆರೋಪಿಗಳನ್ನು ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದೆ. ಈ ಕುರಿತು ಪಾಕಿಸ್ತಾನಕ್ಕೆ ಅನೇಕ ಸಲ ತಿಳಿಸಲಾಗಿದೆ. ಪರಿಸ್ಥಿತಿಯನ್ನು ಸಹ ಮನವರಿಕೆ ಮಾಡಿಕೊಡಲಾಗಿದೆ. ಆದರೂ ತನ್ನ ಹಠಮಾರಿ ಧೋರಣೆ ಮುಂದುವರೆಸಿರುವ ಪಾಕ್ ಡಿಸೆಂಬರ್ 26ರ ವರೆಗೆ ಅಂತಿಮ ಗಡುವು ನೀಡಲಾಗಿದೆ. ಭಾರತ ನೀಡಿರುವ ಕಾಲಾವಕಾಶದೊಳಗೆ ಉಗ್ರರ ವಿರುದ್ಧ ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ಯುದ್ಧ ಎದುರಿಸಲಿ ಎನ್ನುವ ಗಟ್ಟಿಯಾದ ಮಾತುಗಳು ಭಾರತದ ಮುಖಂಡರಿಂದ ಹೊರಬಿದ್ದಿದೆ ಗುಪ್ತಚರ ಸಂಸ್ಥೆ ಹೇಳಿದೆ.
ಕಳೆದ ನವೆಂಬರ್ ನಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 195 ಮಂದಿ ಸಾವನ್ನಪ್ಪಿದ್ದರು, ನೂರಾರು ಜನ ಗಾಯಗೊಂಡಿದ್ದರು. ಮುಂಬೈ ದಾಳಿಯ ನಂತರ ಭಾರತೀಯ ಸೇನಾ ಪಾಕ್ ಮೇಲೆ ಯುದ್ಧ ಸಾರಲು ಎಲ್ಲ ತಯಾರಿಯನ್ನೂ ನಡೆಸಿದ್ದು, ಶಸ್ತ್ರಸಜ್ಜಿತವಾಗಿದೆ. ಪ್ರಧಾನಮಂತ್ರಿಯವರ ಗ್ರೀನ್ ಸಿಗ್ನಲ್ ಬೀಳುವುದೊಂದೆ ಬಾಕಿ ಇದೆ. ಭಾರತಕ್ಕೆ ಅಮೆರಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಗುಪ್ತಚರ ಸಂಸ್ಥೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
ಯುದ್ಧವೊಂದೇ ಏಕೈಕ ಮಾರ್ಗ:ಬಾಳಾ ಠಾಕ್ರೆ
ತಾಲಿಬಾನ್ ಉಗ್ರರಿಂದ ಪಾಕಿಗೆ ಬೆಂಬಲ
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications