ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ

By Staff
|
Google Oneindia Kannada News

BJP will sweep the by-election:BSY in Turuvekere
ತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.

ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 'ಮುಂದೆ ಆಪರೇಷನ್ ಕಮಲವಾಗಲಿ, ಉಪ ಚುನಾವಣೆಗಳನ್ನು ನಡೆಸುವ ಪರಿಸ್ಥಿತಿ ಬರಬಾರದು' ಎಂದರು. ಈ ಉಪ ಚುನಾವಣೆಗಳ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಆಗಲಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಜೋರಾಗಿದ್ದು 8 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೋಲಿನ ಭೀತಿಯಿಂದ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ. ಮತದಾರರು ಈ ಪಕ್ಷಗಳಿಗೆ ಉಪ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿಗಳು, ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ ಸಚಿವ ಸಂಪುಟದಿಂದ ಕೈಬಿಟ್ಟ ಪಕ್ಷೇತರರಿಗೆ ಪುನಃ ಸಂಪುಟದಲ್ಲಿ ಸ್ಥಾನ ನೀಡಲಾಗುತ್ತದೆ ಎಂದು ತಿಳಿಸಿದರು. ಜ.16ರ ಬೆಳಗಾವಿ ಅಧಿವೇಶನದಲ್ಲಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇ.90ರಷ್ಟನ್ನು ಈಡೇರಿಸಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ದೇಶಪಾಂಡೆ 0; ಗೌಡ 2; ಯಡ್ಡಿ 6

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X