ಮತದಾನಕ್ಕೆ ಹುಕ್ಕೇರಿ ಅರಭಾವಿ ಸಜ್ಜು
ಬೆಳಗಾವಿ, ಡಿ. 25:ಇದೇ ಡಿಸೆಂಬರ್ 27 ರಂದು ನಡೆಯಲಿರುವ ಹುಕ್ಕೇರಿ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ.
ಜಿಲ್ಲಾ ಚುನಾವಣಾಧಿಕಾರಿ ಡಾ. ಜೆ. ರವಿಶಂಕರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ. ಸೋನಿಯಾ ನಾರಂಗ ಅವರು ಸುದ್ದಿಗಾರರಿಗೆ ಈ ವಿಷಯವನ್ನು ತಿಳಿಸುತ್ತ ಸಾರ್ವಜನಿಕರು ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಅಥವಾ ಇತರೆ 20 ಅವಶ್ಯಕ ದಾಖಲೆಗಳಲ್ಲಿ ಒಂದನ್ನು ಮತದಾನದ ಕಾಲಕ್ಕೆ ತರುವಂತೆ ಮನವಿ ಮಾಡಿದರು.
ಈ ಎರಡೂ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 58 ಸೆಕ್ಟರ್ ಅಧಿಕಾರಿಗಳನ್ನು, 58 ಇವಿಎಮ್ ಮಾಸ್ಟರ್ ತರಬೇತಿದಾರರನ್ನು,23 ಮೈಕ್ರೋ ವೀಕ್ಷಕರನ್ನು, 1568 ಮತದಾನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 4 ಜನ ಸೆಕ್ಟರ್ ಮ್ಯಾಜಿಸ್ಟ್ರೇಟ್ರನ್ನು ನೇಮಕ ಮಾಡಲಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ ಎರಡೂ ಕ್ಷೇತ್ರಗಳಲ್ಲಿ ಒಟ್ಟು 14 ಪ್ರಕರಣಗಳು ದಾಖಲಾಗಿವೆ. ಈ ಕುರಿತು ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾದಿಕಾರಿಗಳಾದ ಡಾ. ಜೆ. ರವಿಶಂಕರ ತಿಳಿಸಿದರು. ಚುನಾವಣೆಯು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಪ್ರತಿಯೊಂದು ಮತಗಟ್ಟೆಗೆ ಇಬ್ಬರು ಹೆಡ್ಕಾನ್ಸ್ಟೇಬಲ್, ಮೂವರು ಪೊಲೀಸ್ ಕಾನ್ಸ್ಟೇಬಲ್ ಮತ್ತು ಒಬ್ಬರು ಗೃಹರಕ್ಷಕದಳದ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಮತಿ. ಸೋನಿಯಾ ನಾರಂಗ ತಿಳಿಸಿದರು.
( ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications