ತುರುವೇಕೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರ ದಾಂಧಲೆ
ಬೆಂಗಳೂರು, ಡಿ. 27 : ಚಿತ್ರನಟ ಜಗ್ಗೇಶ್ ರಾಜೀನಾಮೆಯಿಂದ ತೆರವಾಗಿದ್ದ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತದಾನ ನಡೆಯುವ ಸ್ಥಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಬೆಂಬಲಿಗರು ಮತಪಟ್ಟಿಯಲ್ಲಿ ಗೊಂದಲವಿದೆ ಎಂದು ಆರೋಪಿಸಿ ಚುನಾವಣಾಧಿಕಾರಿ ಕಚೇರಿ ಮುತ್ತಿಗೆ ಹಾಕಿ ದಾಂಧಲೆ ನಡೆಸಿದರು.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ನೀಡಲಾಗಿರುವ ಮತದಾರರ ಪಟ್ಟಿಗಳು ಬೇರೆಬೇರೆಯಾಗಿದ್ದು ಗೊಂದಲದಿಂದ ಕೂಡಿವೆ. ಚುನಾವಣಾಧಿಕಾರಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಇಲ್ಲಿ ಮತದಾನವನ್ನು ಮುಂದೂಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದರು.
ತೀವ್ರ ಆಕ್ರೋಶಗೊಂಡಿದ್ದ ಕಾರ್ಯಕರ್ತರು ಚುನಾವಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಕುರ್ಚಿ ಮೇಜುಗಳನ್ನು ಧ್ವಂಸ ಮಾಡಿದರು. ಪೊಲೀಸ್ ಅಧಿಕಾರಿಯನ್ನು ತಳ್ಳಾಡಿದರು. ಭದ್ರತಾ ಸಿಬ್ಬಂದಿ ಎಷ್ಟೇ ವಿನಂತ್ರಿಸಿದರೂ ಕಾರ್ಯಕರ್ತರ ಆಕ್ರೋಶ ಶಮನವಾಗಲಿಲ್ಲ.
ಜೆಡಿಎಸ್ ನಿಂದ ಎಂಟಿ ಕೃಷ್ಣಪ್ಪ, ಕಾಂಗ್ರೆಸ್ ನಿಂದ ಎಚ್.ಬಿ. ನಂಜೇಗೌಡ ಮತ್ತು ಬಿಜೆಪಿಯಿಂದ ಲಕ್ಷ್ಮೀನಾರಾಯಣ ಕಣಕ್ಕಿಳಿದಿದ್ದಾರೆ. 2004ರಲ್ಲಿ ಕೃಷ್ಣಪ್ಪ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ನಡೆದ ಚುನಾವಣೆಯಲ್ಲಿ ಜಗ್ಗೇಶ್ ಜನರ ಅನುಕಂಪದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವ ನಿರೀಕ್ಷೆಯಿದೆ.
ಬೆಳಿಗ್ಗೆಯಿಂದ ಶಾಂತರೀತಿಯಲ್ಲಿ ಸಾಗಿದ್ದ ಮತದಾನ ಮಧ್ಯಾಹ್ನವಾಗುತ್ತಿದ್ದಂತೆ ಕಾವೇರುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿ ಒಟ್ಟಾರೆಯಾಗಿ ಇಲ್ಲಿಯವರೆಗೆ ಕೇವಲ ಶೇ. 20ರಷ್ಟು ಮಾತ್ರ ಮತಚಲಾವಣೆ ಆಗಿದೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications