ಹುಕ್ಕೇರಿ ಮರುಚುನಾವಣೆ ಪ್ರಶ್ನೆಯೇ ಇಲ್ಲ,
ಬೆಂಗಳೂರು, ಡಿ. 29 : ಚಾಲಕನ ಅನಾರೋಗ್ಯದಿಂದ ಹುಕ್ಕೇರಿ ಉಪಚುನಾವಣೆ ಮತಯಂತ್ರಗಳನ್ನು ಸಾಗಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಮುಗುಚಿ ಬಿದ್ದಿದೆ. ಆದರೆ ಈ ಸಮಯದಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಎಂ ಎನ್ ವಿದ್ಯಾಶಂಕರ್ ಸ್ಪಷ್ಟಪಡಿಸಿದರು.
ಕಳೆದ ಭಾನುವಾರ ರಾತ್ರಿ ಮತದಾನ ಪ್ರಕ್ರಿಯೆ ಮುಗಿದ ನಂತರ ಹುಕ್ಕೇರಿ ಮತಕ್ಷೇತ್ರದ ಅಭ್ಯರ್ಥಿಗಳ ಹಣೆಬರಹದ ಮತಯಂತ್ರಗಳ ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ಬೇಜಾಬ್ದಾರಿಯಿಂದ ಮುಗುಚಿ ಬಿದ್ದಿತ್ತು. ಹುಕ್ಕೇರಿಯಿಂದ ಬಸ್ ಬೆಳಗಾವಿಗೆ ತೆರಳುತ್ತಿತ್ತು. ಮಧ್ಯರಾತ್ರಿ ಈ ಅವಘಡ ಸಂಭವಿಸಿದ್ದರಿಂದ ನಾನಾ ಅನುಮಾನಗಳಿಗೆ ಕಾರಣವಾಗಿತ್ತು. ಕಾಂಗ್ರೆಸ್ ಕಾರ್ಯಾದ್ಯಕ್ಷ ಡಿ ಕೆ ಶಿವಕುಮಾರ್ ಇದು ಸರ್ಕಾರದ ಪಿತೂರಿ, ಕೂಡಲೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದರು.
ಜೆಡಿಎಸ್ ಮುಖಂಡರೂ ಕೂಡಾ ಇದೇ ರಾಗ ಹಾಡಿದ್ದರು. ಆದ್ದರಿಂದ ಹುಕ್ಕೇರಿ ಕ್ಷೇತ್ರ ಉಪಚುನಾವಣೆಯನ್ನು ಇನ್ನೊಂದು ಸಲ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು. ಇಂದು ಸ್ಪಷ್ಟನೆ ನೀಡಿದ ವಿದ್ಯಾಶಂಕರ್, ಬಸ್ ಚಾಲಕ ಅನಾರೋಗ್ಯದಿಂದ ಈ ಅವಘಢ ಸಂಭವಿಸಿದೆ. ಆದರೆ ಕೆಲ ಮುಖಂಡರು ಮಾಡುತ್ತಿರುವ ಆರೋಪದ ಹಾಗೆ ಯಾವ ಅಕ್ರಮಗಳೂ ಅಲ್ಲಿ ನಡೆದಿಲ್ಲ. ಬಸ್ ಅಪಘಾತವಾಗಿ ಬರೀ 20 ನಿಮಿಷಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳು ಘಟನಾ ಸ್ಥಳದಲ್ಲಿ ಹಾಜರಾಗಿದ್ದಾರೆ. ಕೂಡಲೇ ಇನ್ನೊಂದು ವಾಹನದ ಮೂಲಕ ಮತಯಂತ್ರಗಳನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಾಗಿಸಲಾಗಿದೆ ಎಂದು ಹೇಳಿದರು.
ಮರುಚುನಾವಣೆ ನಡೆಸುವ ಅಗತ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಮರುಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿದ್ಯಾಶಂಕರ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಅಡ್ವಾಣಿ ಪಿಎಂ ಮಾಡುವುದೇ ಏಕೈಕ ಗುರಿ : ಸಿಎಂ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications