ಮಧುಗಿರಿ, ಮದ್ದೂರಿನಲ್ಲಿ ಜೆಡಿಎಸ್ ಗೆಲುವಿನ ನಗೆ?
ಬೆಂಗಳೂರು, ಡಿ. 30 : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವುದರ ಜೊತೆಗೆ ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬಕ್ಕೆ ಭಾರಿ ಪ್ರತಿಷ್ಠೆ ಕಣವಾಗಿರುವ ಮಧುಗಿರಿಯಲ್ಲಿ ಅನಿತಾ ಕುಮಾರಸ್ವಾಮಿ ಸುಮಾರು 6 ಸಾವಿರಕ್ಕೂ ಅಧಿಕ ಮತಗಳಿಂದ ಮುಂದಿದ್ದಾರೆ. ಮೊದಲೆರಡು ಸುತ್ತಿನಲ್ಲಿ ಕಾಂಗ್ರೆಸ್ ಕೆ ಎನ್ ರಾಜಣ್ಣ ಮುಂದಿದ್ದರಾದರೂ ನಂತರದಲ್ಲಿ ನಿಧಾನವಾಗಿ ಜೆಡಿಎಸ್ ಅಭ್ಯರ್ಥಿ ಮುನ್ನೆಡೆ ಗಳಿಸುತ್ತಾ ದಾಪುಗಾಲಿಟ್ಟರು. ಆದರೆ ತನ್ನ ರಾಜಕೀಯ ಗುರು ದೇವೇಗೌಡರಿಗೆ ಸವಾಲು ಎಸೆದಿದ್ದ ಬಿಜೆಪಿ ಅಭ್ಯರ್ಥಿ ಸಿ ಚೆನ್ನಿಗಪ್ಪ ಸೋಲಿನ ಭೀತಿ ಎದುರಿಸುತ್ತಿದ್ದಾರೆ.
ಮದ್ದೂರು ಕ್ಷೇತ್ರದಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಶತಕೋಟ್ಯಾಧೀಶ್ವರ ಡಿ ಸಿ ತಮ್ಮಣ್ಣ ಜೆಡಿಎಸ್ ಅಭ್ಯರ್ಥಿ ಕಲ್ಪನಾ ಸಿದ್ದರಾಜು ಅವರಿಗಿಂತ ಸುಮಾರು 4 ಸಾವಿರಕ್ಕೂ ಅಧಿಕ ಮತಗಳಿಂದ ಹಿಂದೆ ಉಳಿದಿದ್ದಾರೆ. ಶಾಸಕರಾಗಿದ್ದ ಸಿದ್ದರಾಜು ಅವರ ಅಕಾಲಿಕ ಮರಣದಿಂದ ಈ ಕ್ಷೇತ್ರದಲ್ಲಿ ಮತದಾರರಿಗೆ ಮತ್ತೊಮ್ಮೆ ಮತ ಹಾಕುವ ಅವಕಾಶ ದಕ್ಕಿತು. ಸಿದ್ದರಾಜು ಪತ್ನಿ ಕಲ್ಪನಾ ಸಿದ್ದರಾಜು ಈ ಸಲ ಜೆಡಿಎಸ್ ನಿಂದ ಸ್ಪರ್ಧಿಸಿ ಆಯ್ಕೆ ಬಯಸಿದರೆ, ದೇವೇಗೌಡರ ಸಂಬಂಧಿ ಕಾಂಗ್ರೆಸ್ ಮಾಜಿ ಶಾಸಕರಾಗಿದ್ದ ಡಿ ಸಿ ತಮ್ಮಣ್ಣ ಬಿಜೆಪಿಯಿಂದ ಅಖಾಡಕ್ಕಿಳಿದಿರುವುದು ವಿಶೇಷವಾಗಿತ್ತು. ಇಷ್ಟರಲ್ಲಿಯೇ ಅಂತಿಮ ಫಲಿತಾಂಶ ಹೊರಬೀಳಲಿದ್ದು, ಅನುಕಂಪದ ಅಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಲ್ಪನಾ ಸಿದ್ದರಾಜು ಗೆಲುವು ಸಾಧಿಸಬಹುದು.
(ದಟ್ಸ್ ಕನ್ನಡ ವಾರ್ತೆ)
ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು
ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಭರ್ಜರಿ ಜಯ
ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications