ತುರುವೇಕೆರೆ ತಿರುಗುಮುರುಗಾದ ಫಲಿತಾಂಶ
ತುಮಕೂರು, ಡಿ. 30 : ತಾಂತ್ರಿಕ ಕಾರಣಗಳಿಂದ ಬಿಜೆಪಿ ಅಭ್ಯರ್ಥಿ ಎಂ ಡಿ ಲಕ್ಷ್ಮಿನಾರಾಯಣ ಗೆಲುವು ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ ತುರುವೇಕೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ ಟಿ ಕೃಷ್ಣಪ್ಪ ವಿಜಯಮಾಲೆ ಧರಿಸಲಿದ್ದಾರೆ ಎನ್ನಲಾಗಿದೆ. ಇದು ಅಧಿಕೃತವಾಗಿ ಚುನಾವಣೆ ಆಯೋಗ ಸ್ಪಷ್ಟಪಡಿಸಬೇಕಿದೆ. ಎಂ ಟಿ ಕೃಷ್ಣಪ್ಪ 3600 ಮತಗಳ ಮುಂದಿದ್ದು, ಬಹುತೇಕ ಗೆಲುವು ಖಚಿತ ಎನ್ನಲಾಗಿದೆ.
ಜಗ್ಗೇಶ್ ಮಾಡಿಕೊಂಡ ಅನೇಕ ಅವಾಂತರಗಳಿಂದ ತುರುವೇಕೆರೆಯಲ್ಲಿ ಬಿಜೆಪಿಗೆ ಗೆಲುವು ಕಷ್ಟಸಾಧ್ಯ ಎಂದೇ ಹೇಳಲಾಗಿತ್ತು. ಆದರೆ ಇದೆನ್ನೆಲ್ಲಾ ಹುಸಿಗೊಳಿಸಲು ಬಿಜೆಪಿ ಅಭ್ಯರ್ಥಿ ಎಂ ಡಿ ಲಕ್ಷ್ಮಿನಾರಾಯಣ ಭಾರಿ ಸಾಹಸ ಮಾಡಿದರೂ ಏನೂ ಗಿಟ್ಟಲಿಲ್ಲ. ಈ ಮೂಲಕ ಅನೇಕ ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನ ಕಮಲ ತನ್ನ ವಶಕ್ಕೆ ತೆಗೆದುಕೊಳ್ಳಲು ಶತಪ್ರಯತ್ನ ವಿಫಲವಾಗುವ ಸಾಧ್ಯತೆಗಳಿವೆ. ಅಂತಿಮ ಸುತ್ತಿನ ಮತ ಎಣಿಕೆ ಆರಂಭವಾಗಿದೆ, ಜೆಡಿಎಸ್ ಭದ್ರಕೋಟೆ ಎನ್ನಲಾದ ಸಿ ಎಸ್ ಪುರ ಹೋಬಳಿಯ ಮತಗಳ ಕಾರ್ಯ ಆರಂಭವಾಗಿದೆ. ಇಲ್ಲಿ ಎಲ್ಲ ಮತಗಳೂ ಕೂಡಾ ಜೆಡಿಎಸ್ ಗೆ ಎನ್ನಲಾಗಿದೆ.
ಅಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗ್ಗೇಶ್ ಬಿಜೆಪಿ ಸೇರ್ಪಡೆಗೊಂಡಿದ್ದರು. ಬಿಜೆಪಿ ಪಕ್ಷ ಅವರನ್ನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷ ಹುದ್ದೆಯಲ್ಲಿ ನೇಮಿಸಲಾಗಿದೆ. ಆದರೆ ಜಗ್ಗೇಶ್ ತುರುವೇಕೆರೆ ಕಾಂಗ್ರೆಸ್ ನಾಯಕರನ್ನು ಹಿಗ್ಗಾಮುಗ್ಗಾ ಟೀಕೆಯ ಜೊತೆಗೆ ಜನರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರು. ಇದರಿಂದ ಜಗ್ಗೇಶ್ ಮೇಲಿರುವ ಕೋಪವನ್ನು ಬಿಜೆಪಿ ಅಭ್ಯರ್ಥಿ ಲಕ್ಷ್ಮಿನಾರಾಯಣ ಮೇಲೆ ತೀರಿಸಿಕೊಳ್ಳುತ್ತಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದರು. ಈ ಮಾತು ಮತಗಳಾಗಿ ಪರಿವರ್ತನೆಯಾಗಿದೆಯೇ ?
(ದಟ್ಸ್ ಕನ್ನಡ ವಾರ್ತೆ)
ಕಲ್ಪನಾ ಸಿದ್ದರಾಜುಗೆ ಮದ್ದೂರು ವಡೆ
ಜಯದ ಹಾದಿಯಲ್ಲಿ ಅನಿತಾ ಕುಮಾರಸ್ವಾಮಿ
ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications