ಮಾದೇಗೌಡರ ಮೇಲೆ ಬಿಜೆಪಿ ಜನರ ಹಲ್ಲೆ

'ಮಾದೇಗೌಡರು ತಮ್ಮ ಮಗನನ್ನು ರಾಜಕೀಯವಾಗಿ ಪ್ರವರ್ಧಮಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಮದ್ದೂರಿನಲ್ಲಿ ಸೋಲಲು ಮಾದೇಗೌಡರೇ ಕಾರಣ' ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಮಾದೇಗೌಡರನ್ನು ದೈಹಿಕವಾಗಿ ಹೊಡೆದಿದ್ದಲ್ಲದೆ ಅವರ ಬಟ್ಟೆಗಳನ್ನು ಹರಿದು ಚಿಂದಿಮಾಡಲಾಗಿದೆ. ಈಗ ತಾನೆ ಮುಗಿದಿರುವ ಉಪಚುನಾವಣೆಯಲ್ಲಿ ಇಲ್ಲಿ ಜೆಡಿಎಸ್ ಅಭ್ಯರ್ಥಿ ಕಲ್ಪನಾ ಸಿದ್ದರಾಜು ಗೆದ್ದಿದ್ದು, ತಮ್ಮಣ್ಣ ಹಿನಾಯವಾಗಿ ಸೋತಿದ್ದಾರೆ. ಹಲ್ಲೆ ಮಾಡಿದವರು ನನ್ನನ್ನು ಕೊಂದಿಲ್ಲದಿರುವುದೇ ಹೆಚ್ಚು. ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾದೇಗೌಡರು ಆಗ್ರಹಿಸಿದ್ದಾರೆ.
ದೇವೇಗೌಡ ಧರಣಿ ಬೆದರಿಕೆ : ಮಾದೇಗೌಡರ ಮೇಲೆ ಹಲ್ಲೆ ನಡೆದಿರುವುದನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳನ್ನು ಕೂಡಲೆ ಬಂಧಿಸದಿದ್ದರೆ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಯ ಮುಂದೆ ಸ್ವತಃ ಧರಣಿ ಕೂಡುವುದಾಗಿ ಬೆದರಿಸಿದ್ದಾರೆ.
ಮಾದೇಗೌಡ ಮತ್ತು ನನ್ನ ನಡುವೆ ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅಂತಹ ಹಿರಿಯ ರಾಜಕಾರಣ ಮೇಲೆ ನಡೆದ ಹಲ್ಲೆ, ಅವಮಾನ ದುಃಖ ತರುವಂಥದ್ದು ಎಂದು ದೇವೆಗೌಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ಹೆಣ್ಣಮಗು ಕಲ್ಪನಾ ಸಿದ್ದರಾಜು ಘಟಾನುಘಟಿಗಳನ್ನು ಸೋಲಿಸಿದ್ದಾರೆ. ಅವರ ಮೇಲೆಯೂ ಹಲ್ಲೆಯಾಗಬಹುದು. ಅಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಹಲ್ಲೆ ಮಾಡಿದ ಮೇಲೆ ಎಸ್ ಪಿಗೆ ದೂರು ನೀಡಿದರೂ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಜಿಲ್ಲಾಧಿಕಾರಿ ಕೂಡ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೇವೇಗೌಡ ಆರೋಪಿಸಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಕಲ್ಪನಾ ಸಿದ್ದರಾಜುಗೆ ಮದ್ದೂರು ವಡೆ
ವಿಧವೆಯರ ಬೆಂಬಲಕ್ಕೆ ನಿಲ್ಲುವ ಮಂಡ್ಯ
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications