ಪಕ್ಷೇತರರನ್ನು ಕೈಬಿಡುವುದಿಲ್ಲ: ಯಡಿಯೂರಪ್ಪ
ಬೆಂಗಳೂರು, ಡಿ. 30 : ಸಂಪುಟದಲ್ಲಿರುವ ಪಕ್ಷೇತರರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಅಪತ್ಕಾಲದಲ್ಲಿ ಅಪದ್ಭಾಂದವನಂತೆ ಸರ್ಕಾರ ರಚಿಸಲು ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿಗಳ ಹಿತವನ್ನು ಸರ್ಕಾರ ಕಾಯ್ದಕೊಂಡು ಹೋಗಲಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಉಪಚುನಾವಣೆಯ ಎಂಟು ಕ್ಷೇತ್ರಗಳಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ವಶಪಡಿಸಿಕೊಂಡಿರುವ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಗಳನ್ನು ಸಂಪುಟ ಕೈಬಿಡಲಾಗುತ್ತಿದೆ ಎನ್ನುವ ಗಾಳಿ ಸುದ್ದಿಯನ್ನು ಅವರು ತಳ್ಳಿಹಾಕಿದರು. ಇದೊಂದು ಶುದ್ಧ ಸುಳ್ಳು. ಪಕ್ಷೇತರರು ಸರ್ಕಾರದ ಅವಿಬಾಜ್ಯ ಅಂಗ ಎಂದು ಪುನರುಚ್ಚರಿಸಿದರು. ಸಂಪುಟದಲ್ಲಿರುವ ನಾಲ್ಕು ಸಚಿವರೂ ಅರ್ಹ ಗೆಲುವು ಸಾಧಿಸಿರುವುದು ಸರ್ಕಾರದ ಜನಪರ ಕೆಲಸ ಹಾಗೂ ಅಭಿವೃದ್ಧಿ ಯೋಜನೆಗಳಿಂದ ಎಂದ ಮುಖ್ಯಮಂತ್ರಿಯವರು, ಸಚಿವರು ಕ್ಷೇತ್ರದ ಅಭಿವೃದ್ಧಿ ಹಗಲಿರುಳು ಶ್ರಮಿಸಿದ್ದರಿಂದ ಭಾರಿ ಅಂತರದ ಗೆಲುವು ಸಾಧಿಸುವುದು ಸಾಧ್ಯವಾಯಿತು ಎಂದರು.
ಉಪಚುನಾವಣೆಯಲ್ಲಿ ಐವರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಸ್ಥಿರ ಹಾಗೂ ಸುಭದ್ರ ಸರ್ಕಾರಕ್ಕೆ ಭದ್ರಬುನಾದಿಯಾಯಿತು. ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅನೇಕ ಜನಪರ ಯೋಜನೆಗಳನ್ನು ಕಾರ್ಯಗತಗೊಳಿಸುವ ಮೂಲಕ ಉತ್ತಮ ಆಡಳಿತ ನೀಡುವ ಭರವಸೆಯನ್ನು ಯಡಿಯೂರಪ್ಪ ನೀಡಿದರು. ಸಚಿವರಾದ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಆನಂದ ಅಸ್ನೋಟಿಕರ್ ಹಾಗೂ ಶಿವನಗೌಡ ನಾಯಕ ಭರ್ಜರಿ ಜಯಗಳಿಸಿದ್ದಾರೆ.
ದೊಡ್ಡಬಳ್ಳಾಪುರದಿಂದಲೂ ಜಾಲಪ್ಪ ಪುತ್ರ ಜೆ ನರಸಿಂಹಸ್ವಾಮಿ ಕೂಡ ಅರ್ಹ ಗೆಲುವು ದಾಖಲಿಸಿದ್ದಾರೆ. ಪಕ್ಷೇತರ ಶಾಸಕರಾದ ಗೂಳಿಹಟ್ಟಿ ಶೇಖರ್, ಎನ್ ನರೇಂದ್ರಸ್ವಾಮಿ, ವೆಂಕಟರಮಣಪ್ಪ ಹಾಗೂ ಶಿವರಾಜ್ ತಂಗಡಗಿ ಸರ್ಕಾರ ರಚಿಸಲು ಮಹತ್ವದ ಪಾತ್ರ ವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಗೆದ್ದವರು ಬಿದ್ದವರು: ಮತಗಳಿಕೆ ವಿವರ
ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು
ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಭರ್ಜರಿ ಜಯ
ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications