ಪಕ್ಷೇತರರನ್ನು ಕೈಬಿಡುವುದಿಲ್ಲ: ಯಡಿಯೂರಪ್ಪ
ಬೆಂಗಳೂರು, ಡಿ. 30 : ಸಂಪುಟದಲ್ಲಿರುವ ಪಕ್ಷೇತರರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಅಪತ್ಕಾಲದಲ್ಲಿ ಅಪದ್ಭಾಂದವನಂತೆ ಸರ್ಕಾರ ರಚಿಸಲು ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿಗಳ ಹಿತವನ್ನು ಸರ್ಕಾರ ಕಾಯ್ದಕೊಂಡು ಹೋಗಲಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಉಪಚುನಾವಣೆಯ ಎಂಟು ಕ್ಷೇತ್ರಗಳಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ವಶಪಡಿಸಿಕೊಂಡಿರುವ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಗಳನ್ನು ಸಂಪುಟ ಕೈಬಿಡಲಾಗುತ್ತಿದೆ ಎನ್ನುವ ಗಾಳಿ ಸುದ್ದಿಯನ್ನು ಅವರು ತಳ್ಳಿಹಾಕಿದರು. ಇದೊಂದು ಶುದ್ಧ ಸುಳ್ಳು. ಪಕ್ಷೇತರರು ಸರ್ಕಾರದ ಅವಿಬಾಜ್ಯ ಅಂಗ ಎಂದು ಪುನರುಚ್ಚರಿಸಿದರು. ಸಂಪುಟದಲ್ಲಿರುವ ನಾಲ್ಕು ಸಚಿವರೂ ಅರ್ಹ ಗೆಲುವು ಸಾಧಿಸಿರುವುದು ಸರ್ಕಾರದ ಜನಪರ ಕೆಲಸ ಹಾಗೂ ಅಭಿವೃದ್ಧಿ ಯೋಜನೆಗಳಿಂದ ಎಂದ ಮುಖ್ಯಮಂತ್ರಿಯವರು, ಸಚಿವರು ಕ್ಷೇತ್ರದ ಅಭಿವೃದ್ಧಿ ಹಗಲಿರುಳು ಶ್ರಮಿಸಿದ್ದರಿಂದ ಭಾರಿ ಅಂತರದ ಗೆಲುವು ಸಾಧಿಸುವುದು ಸಾಧ್ಯವಾಯಿತು ಎಂದರು.
ಉಪಚುನಾವಣೆಯಲ್ಲಿ ಐವರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಸ್ಥಿರ ಹಾಗೂ ಸುಭದ್ರ ಸರ್ಕಾರಕ್ಕೆ ಭದ್ರಬುನಾದಿಯಾಯಿತು. ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅನೇಕ ಜನಪರ ಯೋಜನೆಗಳನ್ನು ಕಾರ್ಯಗತಗೊಳಿಸುವ ಮೂಲಕ ಉತ್ತಮ ಆಡಳಿತ ನೀಡುವ ಭರವಸೆಯನ್ನು ಯಡಿಯೂರಪ್ಪ ನೀಡಿದರು. ಸಚಿವರಾದ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಆನಂದ ಅಸ್ನೋಟಿಕರ್ ಹಾಗೂ ಶಿವನಗೌಡ ನಾಯಕ ಭರ್ಜರಿ ಜಯಗಳಿಸಿದ್ದಾರೆ.
ದೊಡ್ಡಬಳ್ಳಾಪುರದಿಂದಲೂ ಜಾಲಪ್ಪ ಪುತ್ರ ಜೆ ನರಸಿಂಹಸ್ವಾಮಿ ಕೂಡ ಅರ್ಹ ಗೆಲುವು ದಾಖಲಿಸಿದ್ದಾರೆ. ಪಕ್ಷೇತರ ಶಾಸಕರಾದ ಗೂಳಿಹಟ್ಟಿ ಶೇಖರ್, ಎನ್ ನರೇಂದ್ರಸ್ವಾಮಿ, ವೆಂಕಟರಮಣಪ್ಪ ಹಾಗೂ ಶಿವರಾಜ್ ತಂಗಡಗಿ ಸರ್ಕಾರ ರಚಿಸಲು ಮಹತ್ವದ ಪಾತ್ರ ವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಗೆದ್ದವರು ಬಿದ್ದವರು: ಮತಗಳಿಕೆ ವಿವರ
ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು
ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಭರ್ಜರಿ ಜಯ
ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications