ಲೆಕ್ಕಾಚಾರದಂತೆ ಜಯ ಲಭಿಸಿದೆ: ಎಚ್ಡಿಕೆ
ಬೆಂಗಳೂರು, ಡಿ. 30 : ನಮ್ಮ ಕುಟುಂಬವೇ ಹೋರಾಟದ ಮೂಲಕ ಬಂದಿರುವುದು. ಈ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದರಿಂದ ಇಂದು ಜೆಡಿಎಸ್ ಅರ್ಹವಾದ ಮೂರು ಗೆಲುವುಗಳನ್ನು ಸಾಧಿಸಿದೆ. ಈ ಗೆಲುವು ಜೆಡಿಎಸ್ ಗೆ ನೈತಿಕ ಬಲ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಮಧುಗಿರಿ ಕ್ಷೇತ್ರದ ಫಲಿತಾಂಶ ಹೊರಬಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ತನ್ನ ಸಾಮರ್ಥ್ಯವನ್ನು ಈ ಚುನಾವಣೆ ಮೂಲಕ ತೋರಿಸಿದೆ ಎಂದರು. ಮದ್ದೂರು, ಮಧುಗಿರಿ ಹಾಗೂ ತುರುವೇಕೆರೆಯಲ್ಲಿ ಜೆಡಿಎಸ್ ಗೆಲುವು ಖಚಿತ ಎಂದು ನಾವು ಈ ಹಿಂದೆಯೇ ಲೆಕ್ಕಾಚಾರ ಹಾಕಿಕೊಂಡಿದ್ದೇವು, ಅಲ್ಲದೆ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದೆ ಎನ್ನುವ ವಿಶ್ವಾಸವೂ ಇತ್ತು. ಆದರೆ ಮಧುಗಿರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದರೂ ಗೆಲುವಿನ ಅಂತರ ಕಡಿಮೆ ಇರುವುದರಿಂದ ಅಷ್ಟಾಗಿ ಸಮಾಧಾನ ತಂದಿಲ್ಲ ಎಂದು ಕುಮಾರಸ್ವಾಮಿ ಅತೃಪ್ತಿ ವ್ಯಕ್ತಪಡಿಸಿದರು.
ಪಕ್ಷವನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದವರಿಗೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ. ಮಧುಗಿರಿ, ಮದ್ದೂರು ಹಾಗೂ ತುರುವೇಕೆರೆಯಲ್ಲಿ ಜೆಡಿಎಸ್ ಜಯಗಳಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಮತ್ತಷ್ಟು ನೈತಿಕ ಬಲ ತಂದಂತಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಯಯ್ಯ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿಗೆ ಅಡ್ಡಗಾಲಾದ ಸಿದ್ದರಾಮಯ್ಯ, ಕೊನೆಗೂ ತನ್ನ ಹಠ ಸಾಧಿಸುವಲ್ಲಿ ಸಫಲರಾದರು. ಇದರ ಲಾಭವನ್ನು ಬಿಜೆಪಿ ಪಡೆದುಕೊಂಡಿತೇ ವಿನಃ ಇದು ಬಿಜೆಪಿ ಸ್ವಸಾಮರ್ಥ್ಯದಿಂದ ಬಂದ ಜಯವಲ್ಲ ಎಂದು ಕುಮಾರಸ್ವಾಮಿ ವ್ಯಾಖ್ಯಾನಿಸಿದರು.
(ದಟ್ಸ್ ಕನ್ನಡ ವಾರ್ತೆ)
ಗೌಡರ ಮಾನ ಕಾಪಾಡಿದ ಸೊಸೆ ಅನಿತಾ
ಗೆದ್ದವರು ಬಿದ್ದವರು: ಮತಗಳಿಕೆ ವಿವರ
ಕಲ್ಪನಾ ಸಿದ್ದರಾಜುಗೆ ಮದ್ದೂರು ವಡೆ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications