ಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಹಾಗೂ ಸ್ಟ್ರೀಟ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಡಿ. 31ರ ರಾತ್ರಿ 8 ಗಂಟೆ ಯ ನಂತರ ವಾಹನಗಳು ಈ ಕೆಳಗಿನ ಮಾರ್ಗಗಳ ಮೂಲಕ ಸಾಗಬಹುದು. ಕ್ವೀನ್ಸ್ ರಸ್ತೆ ಪ್ರತಿಮೆ ಕಡೆಯಿಂದ ಎಂಜಿ ರಸ್ತೆ ಮಾರ್ಗವಾಗಿ ಹಲಸೂರು ಕಡೆಗೆ ಹೋಗುವ ವಾಹನಗಳು ಅನಿಲ್ ಕುಂಬ್ಳೆ ವೃತ್ತದ ಬಳಿ ಎಡ ತಿರುವು ಪಡೆದು ವೆಬ್ ಜಂಕ್ಷನ್ ಬಳಿ ಕಬ್ಬನ್ ರಸ್ತೆಯತ್ತ ಬಲ ತಿರುವು ಪಡೆದು ವೆಬ್ ಜಂಕ್ಷನ್ ಬಳಿ ಎಂಜಿ ರಸ್ತೆ ಸೇರುವುದು. ಹಲಸೂರಿನಿಂದ ಬಂದು ದಂಡು ಪ್ರದೇಶದತ್ತ ಸಾಗುವ ವಾಹನಗಳು ಟ್ರಿನಿಟಿ ವೃತ್ತದ ಬಳಿ ಬಲ ತಿರುವು ಪಡೆದು ಹಲಸೂರು ರಸ್ತೆಯಲ್ಲಿ ಎಡ ತಿರುವು ಪಡೆದು ಡಿಕನ್ಸನ್ ರಸ್ತೆ ಮೂಲಕ ಸಾಗುವುದು.
ಇಲ್ಲಿ ಪಾರ್ಕಿಂಗ್ ಮಾಡಿ: ಕಾಮರಾಜ್ ರಸ್ತೆಯ ಎರಡು ಮಗ್ಗುಲುಗಳಲ್ಲಿ ಹಾಗೂ ಕಾಮರಾಜ್ ರಸ್ತೆಯಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ, ಕಬ್ಬನ್ ಪಾರ್ಕ್ ನ ಕಿಂಗ್ಸ್ ರಸ್ತೆ, ಶಿವಾಜಿ ನಗರ ಬಸ್ ನಿಲ್ದಾಣ ಸುತ್ತಮುತ್ತ ನಿಲುಗಡೆ ಮಾಡಬಹುದು. ಇದರ ಜೊತೆಗೆ ಹೊಸ ವರ್ಷದ ಸಂಭ್ರಮದಲ್ಲಿ ಅತಿಯಾಗಿ ಮಧ್ಯಪಾನ ಮಾಡದಿರುವಂತೆ ಪೊಲೀಸ್ ಆಯುಕ್ತ ಶಂಕರಿ ಬಿದರಿ ಮನವಿ ಮಾಡಿಕೊಂಡಿದ್ದಾರೆ. ಗುಂಪಾಗಿ ತೆರಳಿ ಮಧ್ಯಪಾನ ಹಾಗೂ ಸಂಭ್ರಮಾಚರಣೆ ಮಾಡುವವರು ಪೈಕಿ ವಾಹನ ಚಲಾಯಿಸುವವರು ಮಧ್ಯಪಾನ ಮಾಡಬಾರದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ಜೊತೆ ಸಹಕರಿಸುವಂತೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications