ಕಾಶ್ಮೀರ ಕಣಿವೆಗೆ ನೂತನ ಮಹಾರಾಜ
ನವದಹಲಿ, ಡಿ. 31 : ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ಒಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಗೆ ಬೆಂಬಲ ಸೂಚಿಸಿದ್ದು, ಸೋನಿಯಾ ಗಾಂಧಿ ಅವರು ಒಮರ್ ಅಬ್ದುಲ್ಲಾ ಅವರನ್ನು ಮುಖ್ಯಮಂತ್ರಿ ಪೀಠದಲ್ಲಿ ಕೂರಿಸಲು ಸಮ್ಮತಿಸಿದ್ದಾರೆ.
ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲಾ ಸುದೀರ್ಘ ಮಾತುಕತೆ ನಂತರ ಉಭಯ ನಾಯಕರು ಮೈತ್ರಿ ಸರ್ಕಾರದ ವಿಷಯವನ್ನು ಪ್ರಕಟಿಸಿದರು. ಒಟ್ಟು 87 ಸದಸ್ಯ ಬಲದ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಯಾವ ಪಕ್ಷಗಳು ಬಹುಮತ ಪಡೆಯಲು ವಿಫಲವಾಗಿದ್ದವು. ಈ ಹಿನ್ನೆಲೆಯಲ್ಲಿ 28 ಸ್ಥಾನಗಳನ್ನು ಗಳಿಸಿ ಏಕೈಕ ದೊಡ್ಡ ಪಕ್ಷವಾಗಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ, 17 ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿದೆ. ಈ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರೆ ಒಟ್ಟು 45 ಸದಸ್ಯ ಬಲ ಹೊಂದಿದಂತಾಗುತ್ತದೆ. ಇದು ಆಗತ್ಯ ಬಹುಮತಕ್ಕಿಂತ ಹೆಚ್ಚು ಸ್ಥಾನ ಆದಂತಾಗುವುದು.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications