ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು
ಬೆಂಗಳೂರು, ಜ. 2 : 2008 ರ ಅನೇಕ ಕಹಿ ಘಟನೆಗಳಲ್ಲಿ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ ವರ್ಷದಲ್ಲಿ ಸುಮಾರು ಎರಡು ಸಾವಿರ ಜನ ವೈಯಕ್ತಿಕ ಹಾಗೂ ಮತ್ತಿತರ ಕಾರಣಗಳಿಂದ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಬಹಿರಂಗಪಡಿಸಿರುವ ಬೆಂಗಳೂರು ಅಪರಾಧಿ ವಿಭಾಗದ ಪೊಲೀಸ್ ಅಧಿಕಾರಿಗಳು ಮೃತಪಟ್ಟವರಲ್ಲಿ ಗಂಡಸರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ದೇಶದ ಅತ್ಯಹತ್ಯಾ ನಗರಿ ಎಂಬ ಪಟ್ಟ ಹೊಂದಲು ಬೆಂಗಳೂರು ಸಜ್ಜಾಗಿದೆ.
2008ರಲ್ಲಿ ಆತ್ಮಹತ್ಯೆಗಳ 2 ಸಾವಿರದಷ್ಟು ಜರುಗಿವೆ. ಈ ಘಟನೆಯಲ್ಲಿ ಸತ್ತವರು 20 ರಿಂದ 30 ವರ್ಷದ ಅಸುಪಾಸಿನವರಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಕೈಲಾಗದ ಸ್ಥಿತಿ, ಸಾಲದ ಬಾಧೆ ಗಂಡಸರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾದರೆ, ಒತ್ತಡ, ಶೋಷಣೆ, ವರದಕ್ಷಿಣೆ ಕಾಟ, ಭಾವೋನ್ಮಾದಗಳು ಮಹಿಳೆಯರ ಜೀವವನ್ನು ಬಲಿತೆಗೆದುಕೊಂಡಿದೆ. 45 ವರ್ಷದ ನಂತರ ಗಂಡಸರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳುತ್ತಾರೆ ಸಾಗರ್ ಅಪೋಲೋ ಆಸ್ಪತ್ರೆಯ ಮನೋವೈದ್ಯ ಎಂ ಜೆ ಥಾಮಸ್.
ಇದರ ಜೊತೆಗೆ ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟು ಅನೇಕರನ್ನು ಬೀದಿಪಾಲು ಮಾಡಿದೆ. ನೂರೆಂಟು ಕಮಿಟ್ ಮೆಂಟ್ ಗಳನ್ನು ಹೊಂದಿರುವವರಿಗೆ ಇದ್ದಕ್ಕಿದ್ದ ಹಾಗೆ ವ್ಯಾಪಾರದಲ್ಲಿ ನಷ್ಟ ಹಾಗೂ ಪಿಂಕ್ ಸ್ಲಿಪ್ ಮೇಳಗಳ ಹಾವಳಿಯಿಂದ ಅನೇಕರು ಜೀವ ಕಳೆದುಕೊಂಡಿದ್ದಾರೆ ಎನ್ನುವುದು ಸತ್ಯ. ಪರೀಕ್ಷೆಯಲ್ಲಿ ಪಲ್ಟಿ, ಭಗ್ನ ಪ್ರೇಮಿಗಳು ಕೂಡ ಈ ಪಟ್ಟಿಯಲ್ಲಿದ್ದಾರೆ ಎಂದು ಥಾಮಸ್ ಹೇಳುತ್ತಾರೆ.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications