ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆ
ಬೆಂಗಳೂರು, ಜ. 3 : ಹೊಸ ವರ್ಷಾಚರಣೆಯ ದಿನವೇ ಶಾಲೆಗೆ ತೆರಳಿದ್ದ ಏಳು ವರ್ಷದ ಹುಡುಗನನ್ನು ಅಪಹರಿಸಿ 10 ಲಕ್ಷ ರು. ಹಣ ಒತ್ತಾಯಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿಯಲ್ಲಿ ಜರುಗಿದೆ.
ಯಾರೋ ಗೊತ್ತಿರುವವರು ಹಣದಾಸೆಗಾಗಿ ತಮ್ಮ ಮಗನನ್ನು ಅಪಹರಿಸಲಾಗಿದೆ ಎಂದು ಆಟೋ ಚಾಲಕ ಲಕ್ಷ್ಮಣ್ ಮತ್ತು ಸರಸ್ವತಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ವಿವರ : ಡಿಸೆಂಬರ್ 31ರಂದು ಇಂಡಿಯನ್ ಪಬ್ಲಿಕ್ ಶಾಲೆಗೆ ತೆರಳಿದ ಬಾಲಕ ಮಧ್ಯಾಹ್ನ 3 ಗಂಟೆಗೆ ಮನೆಗೆ ಮರಳಬೇಕಾಗಿತ್ತು. ಆದರೆ ಸಾಯಂಕಾಲವಾದರೂ ಹಿಂದಿರುಗದಿದ್ದರಿಂದ ಪಾಲಕರು ಶಾಲೆ, ಹತ್ತಿರದ ಅಜ್ಜಿಯಮನೆಯಲ್ಲಿ ವಿಚಾರಿಸಿದ್ದಾರೆ. ಅಂದು ರಾತ್ರಿ 11 ಗಂಟೆಯವರೆಗೆ ಹುಡುಕಿದರೂ ಬಾಲಕ ಸಿಕ್ಕಿಲ್ಲ.
ಹುಡುಕಿ ಬಸವಳಿದಿದ್ದ ಪಾಲಕರಿಗೆ ರಾತ್ರಿ 1 ಗಂಟೆಗೆ ಹೊಸಕೋಟೆಯಲ್ಲಿನ ಟೆಲಿಫೋನ್ ಬೂತ್ ನಿಂದ ಕರೆ ಬಂದಿದೆ. ದುಷ್ಕರ್ಮಿಗಳು ಬಾಲಕನನ್ನು ಬಿಡಬೇಕೆಂದರೆ 10 ಲಕ್ಷ ರು. ನೀಡಬೇಕೆಂದು ಬೇಡಿಕೆ ಮುಂದಿಟ್ಟಿದ್ದಾರೆ. ಆಟೋ ನಡೆಸಿ ಜೀವನ ಹೊರೆಯುತ್ತಿರುವ ಲಕ್ಷ್ಮಣ್ ದಂಪತಿಗಳಿಂದ ಅಷ್ಟೊಂದು ಹಣ ಒಟ್ಟುಗೂಡಿಸಲು ಸಾಧ್ಯವಿಲ್ಲವೆಂಬುದನ್ನು ಅರಿತ ಅಪಹರಣಕಾರರು ಬೇಡಿಕೆಯನ್ನು 2 ಲಕ್ಷಕ್ಕೆ ಇಳಿಸಿದ್ದಾರೆ.
ಸಂಭಾಷಣೆ ನಡೆಯುವಾಗ ಬಾಲಕನೊಡನೆ ಮಾತನಾಡಲು ಅಪಹರಣಕಾರರು ಅವಕಾಶ ನೀಡಿಲ್ಲ. ಅಪಹರಣಕಾರರು ಉರ್ದು ಮತ್ತು ಹಿಂದಿಯಲ್ಲಿ ಮಾತನಾಡುತ್ತಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ತಮಗೆ ಯಾರ ವಿರುದ್ಧವೂ ದ್ವೇಷವಿಲ್ಲದ್ದರಿಂದ ಯಾರ ಮೇಲೂ ಅನುಮಾನವಿಲ್ಲ ಎಂದು ಬಾಲಕನ ಪಾಲಕರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications