ದೊಡ್ಡಬಳ್ಳಾಪುರದಲ್ಲಿ ಆತ್ಮಹತ್ಯೆಗೆ ಕುಟುಂಬ ಯತ್ನ

ಬೆಂಗಳೂರು, ಜ. 3 : ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ನಾಲ್ವರ ಕುಟುಂಬವೊಂದು ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಕಳೆದ ರಾತ್ರಿ ಜರುಗಿದೆ. ನಾಲ್ವರು ಇಲಿಪಾಶಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಈ ಘಟನೆಯಲ್ಲಿ ತಂದೆ ಮುನಿರಾಜು ಮತ್ತು 10 ವರ್ಷದ ಮಗಳು ಸಾವಿಗೀಡಾಗಿದ್ದು, ಮುನಿರಾಜುವಿನ ಹೆಂಡತಿ ಕಮಲಮ್ಮ ಮತ್ತು ಇನ್ನೊಬ್ಬ ಮಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಮ್ಮ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇನ್ನೊಬ್ಬ ಮಗಳು ಇನ್ನೂ ಅಪಾಯದಿಂದ ಹೊರಬಂದಿಲ್ಲ.

ಕೂಲಿನಾಲಿ ಮಾಡಿ ಬದುಕು ಸಾಗಿಸುತ್ತಿದ್ದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಕೈಹಾಕಲು ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು
ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+