ಮೂರನೇ ದಿನಕ್ಕೆ ಕಾಲಿಟ್ಟ ಟ್ಯಾಂಕರ್ ಮುಷ್ಕರ
ಬೆಂಗಳೂರು, ಜ.3: ಸಾಗಣೆ ಶುಲ್ಕಕ್ಕೆ ಸಂಬಂಧಿಸಿದಂತೆ ತೈಲ ಕಂಪನಿಗಳು ಮತ್ತು ಅನಿಲ ಟ್ಯಾಂಕರ್ ಮಾಲೀಕರ ನಡುವಿನ ಮಾತುಕತೆ ವಿಫಲವಾಗಿದ್ದು ಮುಷ್ಕರ 3ನೇ ದಿನಕ್ಕೆ ಕಾಲಿರಿಸಿದೆ. ಅನಿಲ ಟ್ಯಾಂಕರ್ ಗಳ ಮುಷ್ಕರ ಹೀಗೆ ಮುಂದುವರಿದರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಡುಗೆ ಅನಿಲಕ್ಕೆ ಪರದಾಡಬೇಕಾಗುತ್ತದೆ.
ಸುಮಾರು 3,700 ಅನಿಲ ಟ್ಯಾಂಕರ್ ಗಳು ಸಂಚಾರವನ್ನು ಸ್ಥಗಿತಗೊಳಿಸಿವೆ. ದಕ್ಷಿಣ ಭಾರತ ಟ್ಯಾಂಕರ್ ಮಾಲೀಕರು ಮಾತ್ರ ಮುಷ್ಕರದಲ್ಲಿ ನಿರತರಾಗಿದ್ದು,ಸಮಸ್ಯೆ ಬಗೆಹರಿಯದಿದ್ದರೆ ಜನವರಿ 5 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ.
ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅನಿಲ ಸಂಗ್ರಹಣೆ ಖಾಲಿಯಾಗಿದೆ. ಮುಷ್ಕರ ಮುಂದುವರಿದರೆ ರಾಜ್ಯದ ಇತರಜಿಲ್ಲೆಗಳಿಗೂ ಅಡುಗೆ ಅನಿಲದ ಬಿಸಿ ತಟ್ಟಲಿದೆ. ಮುಷ್ಕರ ಬಿಸಿಆಟೋ ಪ್ರಯಾಣ ಹಾಗೂ ಹೋಟೆಲ್ ಉದ್ಯಮದ ಮೇಲೆ ತಟ್ಟಲಿದೆ.
ಜ.5ರ ಮುಷ್ಕರಕ್ಕೆ ನಿರಾಕರಣೆ: ಜ.5ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಸಾಗಣೆ ವಾಹನಗಳ ಮುಷ್ಕರದಲ್ಲಿ ಭಾಗವಹಿಸುತ್ತಿಲ್ಲ ಎಂದು ಕರ್ನಾಟಕ ಲಾರಿ ಮಾಲೀಕರ ಸಂಘಗಳ ಒಕ್ಕೂಟ ತಿಳಿಸಿದೆ. ಡೀಸೆಲ್ ಬೆಲೆ ಇಳಿಕೆ, ಟೋಲ್ ತೆರಿಗೆ ರದ್ದು ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗುತ್ತಿದೆ. ಲಾರಿ ಮಾಲೀಕರು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ ಎಂದು ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications